Wednesday, September 08, 2010

ಇವರು ಯಾರು ಬಲ್ಲಿರೇನು?

ಲೇಖಕರೊಬ್ಬರ ಕೃತಿಯೊಂದಿಗೆ ನಡೆಸಿದ ಅನುಸಂಧಾನದಿಂದ ಹೊರಹೊಮ್ಮಿದ ಈ ಕೆಳಗಿನ ಸಾಲುಗಳನ್ನು ಓದುತ್ತಿದ್ದ ಹಾಗೆ, ನನ್ನ ಪ್ರಶ್ನೆಗೆ ನಿಮಗೆ ಉತ್ತರ ಹೊಳೆದೇ ಇರುತ್ತದೆ. ಕೊನೆಯಲ್ಲಿ ಅವರ ಫೋಟೋ ಕೂಡಾ ಇದೆ. ಜೊತೆಗೆ ಒಂದು ಕ್ಲೂ ಕೂಡಾ!
  • ದೇವರು ಇದ್ದಾನೋ ಇಲ್ಲವೋ. ಆದರೆ ಇದ್ದಾನೆ ಎಂದಾಗ ಆಗುವ ವಿಸ್ಮಯ, ಇಲ್ಲ ಎಂದಾಗಲೂ ಆಗುತ್ತದೆ. ಅಂತಹ ವಿಸ್ಮಯಗಳ ಹುಡುಕಾಟ ಇವರ ಹವ್ಯಾಸ. 
  • ಒಬ್ಬ ಮನುಷ್ಯ ಸಾಮಾಜಿಕವಾಗಿ ಸ್ವಲ್ಪ ಗುರುತಿಸಲ್ಪಟ್ಟರೆ ಸಾಕು. ಅವನನ್ನು ಒಂದು ಫಂಥಕ್ಕೆ ಸೀಮಿತಗೊಳಿಸಿ, ಅವನ ಪ್ರಗತಿಪರವಾದ, ಜೀವಪರವಾದ ನಿಲುವುಗಳನ್ನು ಮೂಲೆಗುಂಪು ಮಾಡುವ ಪ್ರತಿಗಾಮಿತನ ಶಕ್ತಿಮೂಲ ಯಾವುದು? 
  • ಬಹುಸಂಸ್ಕೃತಿಯ, ಧಾರ್ಮಿಕತೆಯ ನಾಡಿನಲ್ಲಿ ಸಹಬಾಳ್ವೆ ಸಾದ್ಯವಿರುವೆಡೆಯಲ್ಲೆಲ್ಲಾ ಅಂತರಂಗದಲ್ಲಿ ಕ್ರೋಧ, ದ್ವೇಷಗಳಂತೆ ಜಾತಿಯತೆಯೂ ಸ್ಥಾಯಿಯಾಗಿ ಇರುವುದರಿಂದ ಸಾಂಸ್ಕೃತಿಕ ಚಿದ್ರೀಕರಣವಾಗುತ್ತಿರುವುದು.  
  • ಒಳಗೊಳಗೇ ಮತ್ತೆ ಗಟ್ಟಿಯಾಗುತ್ತಿರುವ ಜಾತೀಯತೆ. ಜಾಗತೀಕರಣದ ತೀವ್ರತರ ಪ್ರಭಾವ ಮತ್ತು ಪರಿಣಾಮದಿಂದಾಗಿ ಜಾತೀಯತೆಯ ಬೇರುಗಳು ಸಡಿಲವಾಗಬಹುದೆಂಬ ಆಶಾಭಾವನೆ. 
  • ಸನಾತನವಾದಿಗಳ ಪ್ರಕಾರ ಗುರುಪೀಠದ ಹಕ್ಕೇ ಇಲ್ಲದ ಶೂದ್ರಪರಂಪರೆಯ ಮಠಗಳೂ ಸಹ ಬೆಳ್ಳಿಕಿರೀಟ, ಅಡ್ಡಪಲ್ಲಕ್ಕಿ ಉತ್ಸವ ಪಾದಪೂಜೆ ಮೊದಲಾದವುಗಳಲ್ಲಿ ತೊಡಗುತ್ತಿರುವುದು.  
  • ಸ್ವಲ್ಪಮಟ್ಟಿನ ವೈಚಾರಿಕತೆಯನ್ನು ಮೈಗೂಡಿಸಿಕೊಂಡಿರುವರಿಗೇ (ನನ್ನನ್ನೂ ಸೇರಿಸಿಕೊಂಡು) ಬೆಕ್ಕು ಅಡ್ಡ ಹೋಗುವುದನ್ನು ನೋಡಿ ’ತಥ್’ ಎನ್ನುವಂತೆ ಆಗುತ್ತದೆ. ಅಂದರೆ ಈ ನಂಬಿಕೆಗಳು ಆನುಷಂಗಿಕವೋ ಎಂಬ ಭಾವ. 
  • ಯಾವುದರ ವಿರುದ್ದ ಶೂದ್ರರು ಸೆಟೆದು ನಿಂತಿದ್ದರೊ ಅದರ ಬಗ್ಗೆಯೇ ಮೃದುವಾದರೆಂದರೆ ಶುದ್ರರೂ ದಲಿತರೂ ಮತ್ತೆ ಸನಾತನಿಗಳ ಊಳಗಕ್ಕಿಳಿಯುವ ಸಾಧ್ಯತೆ. 
  • ಮುಸ್ಲಿಂ ಮೂಲಭೂತವಾದದ ದೆಸೆಯಿಂದ ಉದ್ದೀಪನಗೊಳ್ಳುತ್ತಿರುವ ಹಿಂದೂ ಮೂಲಭೂತವಾದದ ಪರಿಣಾಮಗಳು.  
  • ಶಿಕ್ಷಣ ಪದ್ಧತಿ, ಮಾಧ್ಯಮ ಮತ್ತು ಗುಣಮಟ್ಟ. ಟೀ.ವಿ. ಚಾನೆಲ್‌ಗಳನ್ನು ಬದಲಾಯಿಸುವಂತೆ, ನಮ್ಮ ನಾಯಕರುಗಳು ಬದಲಾಯಿಸುತ್ತಿರುವ, ದೂರಗಾಮಿತ್ವವಿಲ್ಲದ ಶಿಕ್ಷಣ ನೀತಿ. 
  • ಶಿಕ್ಷಕ ಸಮುದಾಯದ ನಿಷ್ಕ್ರೀಯತೆ. ಪಠ್ಯೇತರ ಜ್ಞಾನದ ಬಗೆಗಿನ ಅನಾದರ. ಸಾಹಿತ್ಯವು ಅಧ್ಯಾಪಕರ ಸೊತ್ತಾಗಿರುವುದು. ಸಾಹಿತಿಗಳೆನಿಸಿಕೊಂಡವರಲ್ಲಿ ಹೆಚ್ಚುತ್ತಿರುವ ಜ್ಞಾನದ ಅಹಂಕಾರ ಮತ್ತು ಜ್ಞಾನ ಮೂಲದ ನಿರಾಕರಣೆ. 
  • ತನ್ನ ಅನುಭವ ಮತ್ತು ಆಲೋಚನೆಗಳನ್ನು ಇತರರಿಗೆ ವರ್ಗಾಯಿಸುವ ಅತ್ಯಂತ ಕ್ಷಿಪ್ರ ಮತ್ತು ಸಮರ್ಥ ಮಾರ್ಗದ ಅನ್ವೇಷಣೆ.
  • ಕಾಲ, ತಂತ್ರಜ್ಞಾನ ಇವುಗಳ ಬದಲಾವಣೆಯ ವೇಗದೊಂದಿಗೆ ಬದಲಾಗದ ಕನ್ನಡ ಭಾಷೆ. ಕಂಪ್ಯೂಟರ್ ಕ್ಷೇತ್ರದಲ್ಲಿ ಕನ್ನಡವನ್ನು ಬಳಸಲು ಇರುವ ಹಿಂಜರಿಕೆ. 
  • ಪುಸ್ತಕೋದ್ಯಮದ ಶಿಥಿಲ ವ್ಯವಸ್ಥೆ ಹಾಗೂ ಭ್ರಷ್ಟಾಚಾರ. ಸುಳ್ಳು ಹೇಳದೆ, ಮೋಸ ಮಾಡದೆ, ಅನ್ಯಾಯವೆಸಗದೆ ಇಪ್ಪತ್ತನಾಲ್ಕು ಗಂಟೆ ಕಳೆಯುವುದು ಸಹ ಈ ದೇಶದಲ್ಲಿ ದುರ್ಭರವಾದ ಮಹಾಸಾಹಸವಾಗುತ್ತಿರುವುದು. 
  • ಎಲ್ಲಾ ಚಳುವಳಿಗಳು, (ಉದಾಹರಣೆಗೆ ಜಾತಿವಿನಾಶ ಚಳುವಳಿ, ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಒಕ್ಕೂಟ, ನವ್ಯ, ದಲಿತ ಮತ್ತು ಬಂಡಯ, ಇತ್ತಿಚಿನ ಪರಿಸರ ಚಳುವಳಿಗಳು) ಕೇವಲ ಸಾಹಿತ್ಯ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗುತ್ತಿರುವುದು. ಸಾಮಾಜಿಕ ಆಯಾಮವನ್ನು ದಕ್ಕಿಸಿಕೊಳ್ಳದೇ ಇರುವುದು. ಗೋಕಾಕ್ ಮತ್ತು ರೈತ ಚಳುವಳಿಗಳು ಸಾಹಿತ್ಯೇತರ ಚಳುವಳಿಯಾಗಿದ್ದರೂ ಸಾಮಾಜಿಕ ಎಚ್ಚರ ಮೂಡಿಸುವಲ್ಲಿ ತಕ್ಕಮಟ್ಟಿಗೆ ಯಶಸ್ವಿಯಾಗಿದ್ದು. 
  • ಆಯಾಯ ಕಾಲಧರ್ಮವನ್ನು ಅನುಸರಿಸಿ ಸಮಾಜೋದ್ಧಾರದಲ್ಲಿ ನಿರತರಾದವರನ್ನು ನೇತಾರರನ್ನು ಅವರುಗಳ ಹೆಸರನ್ನು ಹೇಳಿಕೊಂಡು ತಿರುಗಾಡುತ್ತಿದ್ದರೆ ಅಭಿವೃದ್ಧಿ ಸಾಧ್ಯವೇ ಇಲ್ಲ. ಇಂದಿನ ಸಮಸ್ಯೆಗಳೇ ಬೇರೆ ಸ್ವರೂಪದವುಗಳು. ಆದ್ದರಿಂದ ಯಾವುದೇ ನಾಯಕ- ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್, ಲೋಹಿಯಾ ಸೇರಿದಂತೆ ಯಾವುದೇ ನಾಯಕರು ಇಂದು ರಿಲವೆಂಟ್ ಆಗಿ ಉಳಿದಿಲ್ಲ. 
  • ವೈಚಾರಿಕತೆ ಎಂಬುದನ್ನು ಕೇವಲ ಧಾರ್ಮಿಕವಾದ, ಕೋಮುವಾದ ಮತ್ತು ಸಾಹಿತ್ಯವಾದದ ಹಿನ್ನೆಲೆಯಲ್ಲಿ ಮಾತ್ರ ಏಕೆ ನೋಡಲಾಗುತ್ತಿದೆ? ವೈಚಾರಿಕತೆಯ ನಿಲುವುಗಳನ್ನು ಆರ್ಥಿಕ ಮತ್ತು ಸಾಮಾಜಿಕ ಆಯಾಮಗಳಿಂದ ಏಕೆ ನೋಡಲಾಗುತ್ತಿಲ್ಲ? 
  • ಮನುಷ್ಯನನ್ನು ಒಟ್ಟು ಪರಿಸರದಿಂದ ಬೇರೆಯಾಗಿಯೇ ನೋಡುತ್ತಿರುವುದರಿಂದ ಆಗುತ್ತಿರುವ ದುರಂತ.
ಕ್ಲೂ : ಅಂದ ಹಾಗೆ ಇಂದು ಅವರ ಹುಟ್ಟು ಹಬ್ಬ.
 

6 comments:

Srinivasa Pejathaya said...

mudigereya thapasvi prakruthiya chiranthana premi nammellarigu prakruthi, vijnanagala kabbinadha kadaleyannu jasaamanyanindha aadubhasheyalli pravachisidha mahanmurthi..

ಕ್ಷಣ... ಚಿಂತನೆ... said...

sir, Poornachandra Tejaswiyavru...

shivu.k said...

ಸರ್,

ಪೂರ್ಣ ಚಂದ್ರ ತೇಜಸ್ವಿಯವರು. ಇವತ್ತು ಅವರ ಹುಟ್ಟು ಹಬ್ಬ. ಅವರ ಬಗ್ಗೆ ನಿಮ್ಮ ಲೇಖನ ಓದಿದೆ. ತುಂಬಾ ಖುಷಿಯಾಯ್ತು...ಅವರು ಸತ್ತಿಲ್ಲ. ನಮ್ಮೊಂದಿಗೆ ಇದ್ದಾರೆ. ಅನ್ನಿಸುತ್ತೆ..

shridhar said...

ಪೊಚಂತೆಯವರ ಹುಟ್ಟು ಹಬ್ಬದಂದು ಒಂದು ಒಳ್ಳೆಯ ಲೇಖನ ..

ಸಾಗರದಾಚೆಯ ಇಂಚರ said...

ಪೂಚತೆ ಯವರ ಹುಟ್ಟಿದ ಹಬ್ಬ ಕ್ಕೆ ಒಳ್ಳೆಯ ಬರಹ

ನಾನು ಅವರ ಅಭಿಮಾನಿ

Ashok.V.Shetty, Kodlady said...

Naanu saha avra abhimaani...lekhana odi santosha aitu....dhanyavadagalu...