ಕುಪ್ಪಳಿ, ತೇಜಸ್ವಿ, ಪುಸ್ತಕ ಬಿಡುಗಡೆ, ಕವಿಶೈಲ, ಸೂರ್ಯಾಸ್ತ...
ಏಪ್ರಿಲ್ ೫. ಕುಪ್ಪಳಿಯ ಹೇಮಾಂಗಣದಲ್ಲಿ ಎರಡು ಪುಸ್ತಕಗಳ ಬಿಡುಗಡೆಯ ಸಮಾರಂಭ. ಒಂದು, ರಾಜೇಶ್ವರಿಯವರ ನನ್ನ ತೇಜಸ್ವಿಯಾದರೆ, ಎರಡನೆಯದು ಕರೀಗೌಡ ಬೀಚನಹಳ್ಳಿಯವರ ತೇಜಸ್ವಿ ಬದುಕು ಮತ್ತು ಬರಹ. ಮದ್ಯಾಹ್ನ ವಿಚಾರಗೋಷ್ಠಿ.
ಕಾರ್ಯಕ್ರಮಕ್ಕೂ ಮೊದಲು ತೇಜಸ್ವಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಒಂದು ನಿಮಿಷದ ಮೌನಾಚರಣೆಯಲ್ಲಿ ಅಲ್ಲಿದ್ದವರೆಲ್ಲಾ ಮುಳುಗಿದ್ದಾಗ, ಕಾಡಿನೊಳಗಿದ್ದ ಹಕ್ಕಿಗಳು ಮಾತ್ರ ಹಾಡುತ್ತಲೇ ಇದ್ದವು! ಜೀರುಂಡೆಗಳೂ ಸಹ!
ನಂತರ ನಡೆದ ಸಮಾರಂಭದಲ್ಲಿ ಜಯಂತ ಕಾಯ್ಕಿಣಿ ಪುಸ್ತಕಗಳನ್ನು ಬಿಡುಗಡೆ ಮಾಡಿದರು. ಮಾತನಾಡುವಾಗ ನನ್ನ ತೇಜಸ್ವಿ ಎಂಬ ಶಿರ್ಷಿಕೆಯಲ್ಲಿ ಅಡಗಿರುವ ಆಪ್ತಭಾವವನ್ನು ಆತ್ಮೀಯವಾಗಿ ವ್ಯಾಖ್ಯಾನಿಸಿದರು. ರಾಜೇಶ್ವರಿಯವರೂ ಪ್ರತಿಕ್ರಿಯಿಸಿದರು.
ತೇಜಸ್ವಿ ಹುಡಕಾಟದಲ್ಲಿದ್ದಾಗ, ರಾಜೇಶ್ವರಿಯವರೂ ಹಡುಕಾಟದಲ್ಲಿರುತ್ತಿದ್ದರು. ತೇಜಸ್ವಿ ಕಂಡಿದ್ದನ್ನು ತಾವೂ ಕಾಣುತ್ತಿದ್ದರು. ಒಂದು ಹೆಜ್ಜೆ ಮುಂದೆ ಹೋಗಿ, ಆ ಕ್ಷಣದ ತೇಜಸ್ವಿಯವರನ್ನು ಕಾಣುತ್ತಿದ್ದರು. ತೇಜಸ್ವಿ ಹಕ್ಕಿಗಳ ಭಾವನೆಗಳನ್ನು ಗ್ರಹಿಸುತ್ತಿದ್ದರೆ, ರಾಜೇಶ್ವರಿಯವರು ಅದರ ಜೊತೆಗೆ ತೇಜಸ್ವಿಯವರ ಭಾವನೆಗಳನ್ನೂ ಗ್ರಹಿಸುತ್ತಿದ್ದರು. ಅವೆಲ್ಲವುಗಳನ್ನು ಪುಸ್ತಕದಲ್ಲಿ ತುಂಬಾ ತುಂಬಾ ಆಪ್ತವಾಗಿ ದಾಖಲಿಸಿದ್ದಾರೆ. ತೇಜಸ್ವಿಯವರು ರಾಜೇಶ್ವರಿಯವರಿಗೆ ಬರೆದ ಪತ್ರಗಳನ್ನೂ ಪುಸ್ತಕದಲ್ಲಿ ಸಂಕಲಿಸಲಾಗಿದೆ. ಅವು ಆ ಕಾಲದ ಸಾಮಾಜಿಕ ಸಾಹಿತ್ಯಕ ವಿಚಾರಗಳನ್ನು ಒಳಗೊಂಡಿರುವ ವಿಶಿಷ್ಟ ದಾಖಲೆಗಳು!
2 comments:
ಪುಸ್ತಕಗಳನ್ನು ಓದಲು ಕುತೂಹಲದಿಂದ ಕಾಯುತ್ತಿದ್ದೇನೆ.
Nandondmaatu ge Namaskaragalu, Naanu Kendra Sahitya Akademiya Publication Assistant Shanmukhananda, Naanu nimmannu gamaniside adre gottiralilla. Snehitare Naanu Kuppali ge baruvaga Camera Tandiralilla dayavittu nanage kelavu photo kalisikoduviraq... shanmkabbare@gmail.com ge pleae
Post a Comment