ನೆನ್ನೆ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಹಾಗೂ ಸಂಜೆ ಪತ್ರಿಕೆಗಳಲ್ಲಿ ಮತ್ತು ಇಂದಿನ ಬಹುತೇಕ ಎಲ್ಲಾ ಪತ್ರಿಕೆಗಳಲ್ಲಿ ಒಂದು ಸುದ್ದಿ ಫೋಟೋ ಸಮೇತ ಪ್ರಕಟವಾಗಿದೆ. ‘ಅಮ್ಮ’ ರಾಯಚೂರಿನ ಬಳಿ ಡೊಂಗುಪುರದಲ್ಲಿ ಕಟ್ಟಿಸಿಕೊಟ್ಟಿರುವ 100 ಮನೆಗಳ ಬೀಗದ ಕೈಯನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದ್ದಾರೆ. ನೆರೆಪೀಡಿತರಿಗೆ ತತ್ತಕ್ಷಣವಾಗಿ ಮನೆಗಳ ಅವಶ್ಯಕತೆಯಿದ್ದು, ಅದನ್ನು ಆದಷ್ಟು ಭೇಗ ನೆರವೇರಿಸಿದ ‘ಅಮ್ಮ’ ಹಾಗೂ ಆ ಕಾರ್ಯಕ್ರಮಕ್ಕೆ ಅಲ್ಲಿಯವರೆಗೂ ಹೋಗಿ ಬಂದ ಮುಖ್ಯಂತ್ರಿಗಳನ್ನು ಮೊದಲು ಅಭಿನಂದಿಸೋಣ.
‘ಅಮ್ಮ’ ಈಗ ಕೇವಲ 100 ಮನೆಗಳನ್ನು ಕಟ್ಟಿಸಿಕೊಟ್ಟಿದ್ದಾರೆ. ಮುಂದೆ ಇನ್ನೂ 600 ಮನೆಗಳನ್ನು ಕಟ್ಟಿಸಿಕೊಡುವವರಿದ್ದಾರಂತೆ. ಪತ್ರಿಕೆಗಳಲ್ಲಿ ಪ್ರಕಟವಾಗಿರುವ ವರದಿಯಂತೆ ಸುಮಾರು ೨೫೦ ಚದುರ ಅಡಿಗಳಷ್ಟಿರುವ ಈ ಮನೆಗಳು ರೈತರ ಅನುಕೂಲಕ್ಕೆ ತಕ್ಕನಾಗಿ ಇವೆಯೇ ಇಲ್ಲವೇ ಎಂಬುದು ಬೇರೆ ಪ್ರಶ್ನೆ. ಆದರೆ ಒಂದು ಮನೆಗೆ ಸುಮಾರು 1 ಲಕ್ಷದ 45 ಸಾವಿರ ರೂಪಾಯಿಗಳನ್ನು ಖರ್ಚು ಮಾಡಲಾಗಿದೆಯಂತೆ. ಅಂದರೆ 100 ಮನೆಗಳಿಗೆ ಸುಮಾರು 1 ಕೋಟಿ 45 ಲಕ್ಷ ರೂಪಾಯಿಗಳನ್ನು ‘ಅಮ್ಮ’ ಆಶ್ರಮ ಖರ್ಚು ಮಾಡಿದೆ.
ಇನ್ನು ಮೊದಲು ಮಾತು ಕೊಟ್ಟಿದ್ದಂತೆ 700 ಮನೆಗಳಲ್ಲಿ ಉಳಿದ 600 ಮನೆಗಳನ್ನು ಮುಂದೆ ಕಟ್ಟಿಸಿಕೊಡಲಾಗುತ್ತದಂತೆ. ಅದಕ್ಕೆ ತಗುಲುವ ಅಂದಾಜು ವೆಚ್ಚ ಸುಮಾರು 8 ಕೋಟಿ 70 ಲಕ್ಷ ರೂಪಾಯಿಗಳು. ಭಲೇ ‘ಅಮ್ಮ’ ಎಂದು ಬಿಡೋಣ.
ಆದರೆ ನೆನ್ನೆಯ ಈ ಸುದ್ದಿಯ ಜೊತೆಗೆ ಇನ್ನೊಂದು ಸುದ್ದಿ ಮುಖ್ಯವಾಗಿ ಕೆಲವು ಪತ್ರಿಕೆಗಳಲ್ಲಿ ತಲೆಬರಹದಲ್ಲೂ ಕಾಣಿಸಿಕೊಂಡಿದೆ. ಅದೇನೆಂದರೆ, ರಾಜ್ಯ ಸರ್ಕಾರ ‘ಅಮ್ಮ’ಗೆ ಕೊಡುಗೆಯಾಗಿ ಬೆಂಗಳೂರಿನ ಹೊರವಲಯದಲ್ಲಿ ಕೆಂಗೇರಿ ಬಳಿ 15ಎಕರೆ ಸರ್ಕಾರಿ ಜಮೀನು ಮತ್ತು 5 ಕೋಟಿ ಹಣವನ್ನು ನೀಡಲಿದೆ ಎಂಬ ಸುದ್ದಿ. ಇಷ್ಟೆಲ್ಲಾ ಉಚಿತ ಕಾಣಿಕೆ ‘ಉಚಿತ’ ಆಸ್ಪತ್ರೆ ಕಟ್ಟಿಸುವುದಕ್ಕೆ ಎಂಬ ಸುದ್ದಿಯೂ ಬಂದಿದೆ.
ಅಮ್ಮ ಈಗ ಕಟ್ಟಿರುವ 100 ಮನೆಗಳು ಹಾಗೂ ಮುಂದೆ ಕಟ್ಟಿಕೊಡಲಿರುವ(?) 600ಮನೆಗಳಿಗೆ ಆಗುವ ಒಟ್ಟು ಖರ್ಚು 10 ಕೋಟಿ 15 ಲಕ್ಷ ರೂಪಾಯಿಗಳು ಮಾತ್ರ. ಅದಕ್ಕೆ ಪ್ರತಿಯಾಗಿ ಸರ್ಕಾರದಿಂದ ಗಿಟ್ಟಿಸಿರುವ ಕಾಣಿಕೆ 15 ಎಕರೆ ಜಮೀನು ಮತ್ತು 5 ಕೋಟಿ ರೂಪಾಯಿ ಹಣ. ಬೆಂಗಳೂರಿನ ಹೊರವಲಯದ ಕೆಂಗೇರಿ ಬಳಿ 15 ಎಕರೆ ಜಮೀನಿನ ಮುಕ್ತ ಮಾರುಕಟ್ಟೆ ಬೆಲೆಯನ್ನು ಕೋಟಿಗಳಲ್ಲಿ ನೀವೇ ಲೆಕ್ಕ ಹಾಕಿಕೊಳ್ಳಿ! ಇಷ್ಟು ಹಣವನ್ನು ನೆರೆ ಪೀಡಿತ ಪ್ರದೇಶದಲ್ಲಿ ಮನೆಕಟ್ಟಲು ಸರ್ಕಾರವೇ ಬಳಸಬಹುದಾಗಿತ್ತಲ್ಲವೆ?
ಇನ್ನು ರಾಜ್ಯದಲ್ಲಿ ಎಷ್ಟೊಂದು ಉಚಿತ ಆಸ್ಪತ್ರೆಗಳಿಗೆ ಜಮೀನು ಇತ್ಯಾದಿ ಸಹಾಯವನ್ನು ಸರ್ಕಾರಗಳು ಹಲವಾರು ವರ್ಷದಿಂದ ಮಾಡುತ್ತಾ ಬಂದಿವೆ. ಆದರೆ ಎಷ್ಟು ಆಸ್ಪತ್ರೆಗಳಲ್ಲಿ ಅವುಗಳ ಘೋಷಿತ ಉದ್ಧೇಶ ಈಡೇರಿದೆ ಹಾಗೂ ಈಡೇರುತ್ತಿದೆ? ಇದು ಚಿದಂಬರ ರಹಸ್ಯ.
ನಮ್ಮ ಊರಿನವರೊಬ್ಬರು ತಮ್ಮ ತಾಯಿಗೆ ಆಗಬೇಕಿದ್ದ ಉದರ ಸಂಬಂಧಿ ಶಸ್ತ್ರಚಿಕಿತ್ಸೆಗೆ ಯಾರದೋ ಮಾತು ಕೇಳಿಕೊಂಡು ವೈಟ್ ಫೀಲ್ಡಿನಲ್ಲಿರುವ ಉಚಿತ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಮೂರು ತಿಂಗಳ ನಂತರದ ಒಂದು ದಿನಾಂಕ (ಆಪರೇಷನ್ ಮಾಡಿಸಿಕೊಳ್ಳಲು) ಹಾಗೂ ಒಂದಷ್ಟು ಮಾತ್ರೆಗಳ ಪ್ರಿಸ್ಕ್ರಿಪ್ಷನ್ ಬರೆದು ಕಳುಹಿಸಲಾಗಿತ್ತು. ಮೂರು ತಿಂಗಳು ಬಿಟ್ಟು ಆಪರೇಷನ್ ಮಾಡಿಸಿಕೊಳ್ಳುವವರೆಗೆ ಖಾಯಿಲೆಯಾಗಲೀ, ರೋಗಿಯಾಗಲೀ ಕಾಯುವುದಿಲ್ಲ ಎಂದು ಅದಷ್ಟು ಬೇಗ ಅರ್ಥ ಮಾಡಿಕೊಂಡು ಆ ಯೋಚನೆಯನ್ನೇ ಕೈಬಿಟ್ಟು ಬೇರೆ ಕಡೆ ಹೋದರು!
ಇದೆಲ್ಲವನ್ನೂ ಗಮನಿಸುತ್ತಿದ್ದರೆ, ಬೆಂಗಳೂರು ಸುತ್ತಮುತ್ತ ಜಮೀನು ಬೇಕಿದ್ದರೆ ನೆರೆಪೀಡಿತ ಪ್ರದೇಶದಲ್ಲಿ ಮನೆ ಕಟ್ಟಿಸಿಕೊಡಬೇಕು ಎಂಬ ಒಳ ಒಪ್ಪಂದ ಏರ್ಪಟ್ಟಿರಬಹುದಾ ಎಂಬ ಗುಮಾನಿ ಬರುವುದಿಲ್ಲವೆ!?
ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗಬಾರದು ಎಂಬ ಮಾತಿದೆ. ಈಗ ಅದಕ್ಕೆ ಇನ್ನೊಂದನ್ನು ಸೇರಿಸಬಹುದಾ?
'ಎಡಗೈಯಲ್ಲಿ ತೆಗೆದುಕೊಂಡಿದ್ದು ಬಲಗೈಗೂ ಗೊತ್ತಾಗಬಾರದು' ಅಂತ.
ಹಗಲು ದರೋಡೆ ಎಂಬುದಕ್ಕೆ ತಾಜಾ ಉದಾಹರಣೆ.
ಹೆಸರು ಯಾರದೋ ಬಸಿರು ಇನ್ಯಾರದೋ?
ಜೈ‘ಅಮ್ಮ’; ಜೈ ಯಡಿಯೂರು‘ಅಪ್ಪ’
ಕೊಸರು: ಕೃಷ್ಣದೇವರಾಯನ ಪಟ್ಟಾಭಿಷೇಕಕ್ಕಾಗಿ 75 ಕೋಟಿ ಖರ್ಚು ಮಾಡಿರುವ ಸುದ್ದಿ ವಿ.ಕ.ದಲ್ಲಿ ಬಂದಿದೆ. 75 ಕೋಟಿ ಹಣದಲ್ಲಿ ಎಷ್ಟು ಮನೆ ಕಟ್ಟಿಕೊಡಬಹುದಿತ್ತು?
Thursday, February 18, 2010
Monday, February 08, 2010
T20 = ತೇಜಸ್ವಿ ಟ್ವೆಂಟಿ : ಸ್ವರೂಪ ಪಂಚಿಂಗ್ ಲೈನ್ಸ್
T20 = ತೇಜಸ್ವಿ ಟ್ವೆಂಟಿ! ಮಾಲಿಕೆಯಲ್ಲಿ ಈ ಬಾರಿ ಅವರ ‘ಸ್ವರೂಪ’ ಕಿರುಕಾದಂಬರಿಯ ಪಂಚಿಂಗ್ ಲೈನ್ಗಳನ್ನು ಆರಿಸಿದ್ದೇನೆ.
ಈಗಾಗಲೇ ‘ಸ್ವರೂಪ’ವನ್ನು ಓದದವರಿಗೆ ಈ ಸಾಲುಗಳನ್ನು ಓದಿ ಮೂಲಕೃತಿಯನ್ನು ಓದಬೇಕು ಎನ್ನಿಸಿದರೆ ನಾನು ಧನ್ಯ. ಈಗಾಗಲೇ ‘ಸ್ವರೂಪ’ವನ್ನು ಓದಿದವರೂ ಮತ್ತೊಮ್ಮೆ ಓದುವಂತಾದರೆ ಡಬಲ್ ಖುಷಿ ನನ್ನದು.
ಪುನರಾವರ್ತನೆಯಾದರೂ ಓದುಗರಲ್ಲಿ ಈ ವಿನಂತಿಯನ್ನು ನಾನು ಮಾಡಿಕೊಳ್ಳಲೇ ಬೇಕಾಗಿದೆ. ಇಲ್ಲಿನ ಎಲ್ಲಾ ವಾಕ್ಯಗಳನ್ನು ಮೂಲಕೃತಿಯಿಂದ ಬೇರ್ಪಡಿಸಿ ಅರ್ಥೈಸಿಕೊಳ್ಳುವ ಪ್ರಯತ್ನ ಮಾಡಬಾರದು. ಕೆಲವೊಂದು ವಾಕ್ಯಗಳನ್ನು ಪ್ರತ್ಯೇಕವಾಗಿ ಅರ್ಥೈಸಿಕೊಂಡಾಗ ‘ಇದೇನು ಹೀಗೆ?’ ಎಂಬ ಪ್ರಶ್ನೆಗಳು ಎದುರಾಗುತ್ತವೆ. ಆಗ ನಮಗೆ ತೋಚಿದ ಸಮಾಧಾನವನ್ನು ನಾವು ಆರೋಪಿಸಿಕೊಂಡು ಇನ್ನಷ್ಟು ಅನರ್ಥ ಮಾಡಿಕೊಳ್ಳುತ್ತೇವೆ. ಆದ್ದರಿಂದ, ಅಂತಹ ಸಂದಿಗ್ಧತೆ ತಲೆದೋರಿದಲ್ಲಿ, ಮೂಲಕೃತಿಯನ್ನು ಓದಿ ಅದರ ಹಿನ್ನೆಲೆಯಲ್ಲಿಯೇ ಅರ್ಥೈಸಿಕೊಳ್ಳಬೇಕು.
1. ಈ ಕೋರ್ಟುಕಚೇರಿಗಳಿಗೆ ತಿರುಗಾಡಿ ನೂರೆಂಟು ಕೇಸುಗಳನ್ನು ಮಾಡಿಕೊಳ್ಳುವ ಹೇಸಿಗೆ ಲೆಕ್ಕಾಚಾರ ಯಾರಿಗೆ ಬೇಕು?
2. ಆರ್ಥಿಕದಾಸ್ಯದಲ್ಲಿ ಆತ್ಮಸ್ವಾತಂತ್ರ್ಯದ ಸಿದ್ದಿ ಸಾಧ್ಯವೇ ಇಲ್ಲ. ದುಡ್ಡು, ದುಡ್ಡಿನಿಂದ ಬರುವ ಅಧಿಕಾರ, ಅದು ಬೇಕೆನಿಸಿದಾಗ ಕೊಡುವ ಸುಖ ಸಂತೋಷ ಇವನ್ನೆಲ್ಲಾ ತ್ಯಾಜ್ಯ ಎಂದು ನೀನು ಹೇಳಿದರೆ ನಿನ್ನನ್ನ ಪಂಚೇಂದ್ರಿಯಗಳಲ್ಲೇ ಏನೋ ಒಂದು ಊನವಿರಬೇಕು.
3. ಸೋಷಲಿಸಂ, ಶೋಷಣೆ ಎನ್ನುವ ಮೂರಕ್ಷರದ ಪದ ಹಣ ಕಂಡೊಡನೆ ದಿಗಿಲು ಬೀಳುವಂತೆ ಮಾಡುತ್ತದೆ. ಪ್ರತಿ ನೂರು ರೂಪಾಯಿ ನೋಟಿನ ಹಿಂದೂ ಒಂದು ಅಮಾನುಷ ಹೇಯತೆಯನ್ನು ಗುಮಾನಿಸುತ್ತದೆ.
4. ಸೋಷಲಿಸಂಮ್ಮಿಗೆ ಸಿಕ್ಕುವುದು ದುಡಿಸಿ ಉತ್ಪಾದನೆ ಮಾಡಿದವನ ಶೋಷಣೆ. ಇನ್ನೊಂದು ಅನ್ಯತರದ್ದು ಅದರ ಹಿಡಿತಕ್ಕೆ ಸಿಗುವುದಿಲ್ಲ.
5. ಶೋಷಣೆ ಒಂದಲ್ಲ ಒಂದು ರೀತಿಯಲ್ಲಿ ಅನಿವಾರ್ಯ. ಇಲ್ಲ ಉತ್ಪಾದಿಸಲು ಶೋಷಿಸಬೇಕು. ಇಲ್ಲ ಹಾಳುಮಾಡಲು ಶೋಷಿಸಬೇಕು.
6. ದುಷ್ಟದೇವತೆ ಆಗಿದ್ದರೆ ಅದು ಸದಾ ರಕ್ತಮಾಂಸಾದಿ ಹೊಲಸಿಗೆ ಹಂಬಲಿಸುವಂಥದಾದರೆ ನಿನ್ನ ಉಗುಳಿನಿಂದ ಮೈಲಿಗೆ ಆಗುತ್ತದೆ ಎನ್ನುವುದು ಸುಳ್ಳು. ಅದು ಒಳ್ಳೆಯ ದೇವತೆ ಆಗಿದ್ದರೆ ಕೇವಲ ಉಗಿದ ಮಾತ್ರಕ್ಕೆ ಕೋಪಿಸಿಕೊಳ್ಳಬೇಕೇಕೆ?
7. ಅವರ ನಂಬಿಕೆ ಬಟ್ಟೆಯ ಒಳಗೆ ಅಂತರಾಳದಲ್ಲಿ, ಕುಳಿತಾಗ ಎದ್ದಾಗ ಕೊರೆಯುವ ದಾರದ ನೋವನ್ನು ಸಹಿಸುವ ನಿಷ್ಠೆಯಾದಾಗ ಅದನ್ನು ಹೇಗೆ ಲೇವಡಿ ಮಾಡಲಿ?
8. ಇಬ್ಬರಲ್ಲೊಬ್ಬರು ಎಲ್ಲಾದರೂ ಒಂದು ಕಡೆ ಒಬ್ಬರ ಪ್ರಾಮಾಣಿಕತೆಯನ್ನು ನಂಬಬೇಕು.
9. ನನ್ನ ತಪೋಭಂಗಕ್ಕೆ ಮೇನಕೆಯೇ ಬೇಕೆಂದಿಲ್ಲ. ಅತಿ ಕುದ್ರವಾದುದೊಂದು ಹಲ್ಲಿ ಬಾಲವಲ್ಲಾಡಿಸಿದರೆ ಸಾಕು. ಹಲ್ಲಿ ಬಾಲ ಅಲ್ಲಾಡಿಸಿದ್ದೂ ಮೇನಕೆ ಮೊಲೆ ಅಲ್ಲಾಡಿಸಿ ಕುಣಿದದ್ದು ಬಿ.ಎ., ಎಂ.ಎ.ಗಳಂಥ ಒಂದಕ್ಕಿಂತ ಇನ್ನೊಂದು ಹೆಚ್ಚಿನ ಯೋಗ್ಯತೆ ಪಡೆದ ಪರೀಕ್ಷೆಗಳೆಂದು ಹೇಗೆ ಹೇಳೋಣ.
10. ನನ್ನಂಥವರು ಇನ್ನೊಂದಿಷ್ಟು ಜನ ಇದ್ದರೆ ಈ ಕರ್ನಾಟಕದಲ್ಲಿ ಮರ್ಯಾದಸ್ತರೇ ಉಳಿಯುವುದಿಲ್ಲ.
11. ಕನ್ನಡದ ಸಾಹಿತಿಯಾಗಬೇಕಾದವನು ಮೊದಲು ಬ್ರಾಹ್ಮಣದ್ವೇಷಿಯಾಗಬೇಕಾಗುವುದು ಅನಿವಾರ್ಯ ಹಾಗೂ ಅದು ನ್ಯಾಯ.
12. ಬುದ್ಧಿ ಎಂದರೆ ತಿಳುವಳಿಕೆ ಎಂದರೆ ಇನ್ನೇನು! ಹಳೆಯ ಘಟನೆಗಳ ಹಿನ್ನೆಲೆಯಲ್ಲಿ ವರ್ತಮಾನವನ್ನು ಕುರಿತು ಆಲೋಚಿಸುವುದು ತಾನೆ!
13. ಬದುಕು ಎಂದರೆ ನನಗೆ ಅನಂತವೂ ಬುದ್ಧಿಯುತವೂ ಆದ ತಂತ್ರ, ರಾಜತಂತ್ರ.
14. ಸ್ತಬ್ಧ ಮೌನದಲ್ಲಿ ದೂರದ ಸಾವಿನಲ್ಲಿ ಹೆಜ್ಜೆ ಸಪ್ಪಳ ಕೇಳುತ್ತದೆ - ಯೌವ್ವನ ಅಲೆ ಎದ್ದ ಕೊಳದಂತೆ.
15. ಕೇವಲ ಅಭಿವ್ಯಕ್ತಿ ಮಾಧ್ಯಮದ ದೆಸೆಯಿಂದ ನನ್ನ ಮಹತ್ವದ ಅರ್ಥವೆಲ್ಲಾ ನನ್ನೊಳಗೇ ಉಳಿದುಕೊಂಡಿದೆ ಎಂದು ನನ್ನ ನಂಬಿಕೆ.
16. ಶಿಕಾರಿ ಎಂದರೆ ಉವಿನ ಅಳಿವಿನ ಹೋರಾಟ.
17. ಶಿಕಾರಿ ಒಂದು ಅನಂತವಾದ ಜೂಜು.
18. ಶಿಕಾರಿ ಒಂದು ವ್ಯಸನ. ಅದೊಂದು ಆಲೋಚನೆಗೆ ಹತ್ತುವ ಚಟ. ಆದರೆ ಶಿಕಾರಿಯನ್ನು ಕಂಡರೆ ನನಗೆ ಇಷ್ಟ. ಏಕೆಂದು ನನಗೆ ಸರಿಯಾಗಿ ಗೊತ್ತಿಲ್ಲ. ಮಾಂಸದಾಸೆಗಂತೂ ಅಲ್ಲ.
19. ಅವಿವಾಹಿತರಾಗಿ ಒಟ್ಟಿಗೆ ಮಲಗುವುದು ಅಧಾರ್ಮಿಕ ಎಂದಲ್ಲ. ಎಲ್ಲಿ ಗರ್ಭಿಣಿಯಾಗಿಬಿಡುತ್ತಾಳೋ ಎಂಬ ಭಯದಿಂದ.
20. ಸೃಷ್ಟಿಯ ಬಗ್ಗೆ, ಜೀವನದ ಬಗ್ಗೆ, ಆಲೋಚಿಸಿದಂತೆಲ್ಲಾ ನನ್ನ ಬಗ್ಗೆಯೇ ನನಗೆ ಒಂದು ತಿಳಿವು ಮೂಡತೊಡಗಿತು.
ಈಗಾಗಲೇ ‘ಸ್ವರೂಪ’ವನ್ನು ಓದದವರಿಗೆ ಈ ಸಾಲುಗಳನ್ನು ಓದಿ ಮೂಲಕೃತಿಯನ್ನು ಓದಬೇಕು ಎನ್ನಿಸಿದರೆ ನಾನು ಧನ್ಯ. ಈಗಾಗಲೇ ‘ಸ್ವರೂಪ’ವನ್ನು ಓದಿದವರೂ ಮತ್ತೊಮ್ಮೆ ಓದುವಂತಾದರೆ ಡಬಲ್ ಖುಷಿ ನನ್ನದು.
ಪುನರಾವರ್ತನೆಯಾದರೂ ಓದುಗರಲ್ಲಿ ಈ ವಿನಂತಿಯನ್ನು ನಾನು ಮಾಡಿಕೊಳ್ಳಲೇ ಬೇಕಾಗಿದೆ. ಇಲ್ಲಿನ ಎಲ್ಲಾ ವಾಕ್ಯಗಳನ್ನು ಮೂಲಕೃತಿಯಿಂದ ಬೇರ್ಪಡಿಸಿ ಅರ್ಥೈಸಿಕೊಳ್ಳುವ ಪ್ರಯತ್ನ ಮಾಡಬಾರದು. ಕೆಲವೊಂದು ವಾಕ್ಯಗಳನ್ನು ಪ್ರತ್ಯೇಕವಾಗಿ ಅರ್ಥೈಸಿಕೊಂಡಾಗ ‘ಇದೇನು ಹೀಗೆ?’ ಎಂಬ ಪ್ರಶ್ನೆಗಳು ಎದುರಾಗುತ್ತವೆ. ಆಗ ನಮಗೆ ತೋಚಿದ ಸಮಾಧಾನವನ್ನು ನಾವು ಆರೋಪಿಸಿಕೊಂಡು ಇನ್ನಷ್ಟು ಅನರ್ಥ ಮಾಡಿಕೊಳ್ಳುತ್ತೇವೆ. ಆದ್ದರಿಂದ, ಅಂತಹ ಸಂದಿಗ್ಧತೆ ತಲೆದೋರಿದಲ್ಲಿ, ಮೂಲಕೃತಿಯನ್ನು ಓದಿ ಅದರ ಹಿನ್ನೆಲೆಯಲ್ಲಿಯೇ ಅರ್ಥೈಸಿಕೊಳ್ಳಬೇಕು.
1. ಈ ಕೋರ್ಟುಕಚೇರಿಗಳಿಗೆ ತಿರುಗಾಡಿ ನೂರೆಂಟು ಕೇಸುಗಳನ್ನು ಮಾಡಿಕೊಳ್ಳುವ ಹೇಸಿಗೆ ಲೆಕ್ಕಾಚಾರ ಯಾರಿಗೆ ಬೇಕು?
2. ಆರ್ಥಿಕದಾಸ್ಯದಲ್ಲಿ ಆತ್ಮಸ್ವಾತಂತ್ರ್ಯದ ಸಿದ್ದಿ ಸಾಧ್ಯವೇ ಇಲ್ಲ. ದುಡ್ಡು, ದುಡ್ಡಿನಿಂದ ಬರುವ ಅಧಿಕಾರ, ಅದು ಬೇಕೆನಿಸಿದಾಗ ಕೊಡುವ ಸುಖ ಸಂತೋಷ ಇವನ್ನೆಲ್ಲಾ ತ್ಯಾಜ್ಯ ಎಂದು ನೀನು ಹೇಳಿದರೆ ನಿನ್ನನ್ನ ಪಂಚೇಂದ್ರಿಯಗಳಲ್ಲೇ ಏನೋ ಒಂದು ಊನವಿರಬೇಕು.
3. ಸೋಷಲಿಸಂ, ಶೋಷಣೆ ಎನ್ನುವ ಮೂರಕ್ಷರದ ಪದ ಹಣ ಕಂಡೊಡನೆ ದಿಗಿಲು ಬೀಳುವಂತೆ ಮಾಡುತ್ತದೆ. ಪ್ರತಿ ನೂರು ರೂಪಾಯಿ ನೋಟಿನ ಹಿಂದೂ ಒಂದು ಅಮಾನುಷ ಹೇಯತೆಯನ್ನು ಗುಮಾನಿಸುತ್ತದೆ.
4. ಸೋಷಲಿಸಂಮ್ಮಿಗೆ ಸಿಕ್ಕುವುದು ದುಡಿಸಿ ಉತ್ಪಾದನೆ ಮಾಡಿದವನ ಶೋಷಣೆ. ಇನ್ನೊಂದು ಅನ್ಯತರದ್ದು ಅದರ ಹಿಡಿತಕ್ಕೆ ಸಿಗುವುದಿಲ್ಲ.
5. ಶೋಷಣೆ ಒಂದಲ್ಲ ಒಂದು ರೀತಿಯಲ್ಲಿ ಅನಿವಾರ್ಯ. ಇಲ್ಲ ಉತ್ಪಾದಿಸಲು ಶೋಷಿಸಬೇಕು. ಇಲ್ಲ ಹಾಳುಮಾಡಲು ಶೋಷಿಸಬೇಕು.
6. ದುಷ್ಟದೇವತೆ ಆಗಿದ್ದರೆ ಅದು ಸದಾ ರಕ್ತಮಾಂಸಾದಿ ಹೊಲಸಿಗೆ ಹಂಬಲಿಸುವಂಥದಾದರೆ ನಿನ್ನ ಉಗುಳಿನಿಂದ ಮೈಲಿಗೆ ಆಗುತ್ತದೆ ಎನ್ನುವುದು ಸುಳ್ಳು. ಅದು ಒಳ್ಳೆಯ ದೇವತೆ ಆಗಿದ್ದರೆ ಕೇವಲ ಉಗಿದ ಮಾತ್ರಕ್ಕೆ ಕೋಪಿಸಿಕೊಳ್ಳಬೇಕೇಕೆ?
7. ಅವರ ನಂಬಿಕೆ ಬಟ್ಟೆಯ ಒಳಗೆ ಅಂತರಾಳದಲ್ಲಿ, ಕುಳಿತಾಗ ಎದ್ದಾಗ ಕೊರೆಯುವ ದಾರದ ನೋವನ್ನು ಸಹಿಸುವ ನಿಷ್ಠೆಯಾದಾಗ ಅದನ್ನು ಹೇಗೆ ಲೇವಡಿ ಮಾಡಲಿ?
8. ಇಬ್ಬರಲ್ಲೊಬ್ಬರು ಎಲ್ಲಾದರೂ ಒಂದು ಕಡೆ ಒಬ್ಬರ ಪ್ರಾಮಾಣಿಕತೆಯನ್ನು ನಂಬಬೇಕು.
9. ನನ್ನ ತಪೋಭಂಗಕ್ಕೆ ಮೇನಕೆಯೇ ಬೇಕೆಂದಿಲ್ಲ. ಅತಿ ಕುದ್ರವಾದುದೊಂದು ಹಲ್ಲಿ ಬಾಲವಲ್ಲಾಡಿಸಿದರೆ ಸಾಕು. ಹಲ್ಲಿ ಬಾಲ ಅಲ್ಲಾಡಿಸಿದ್ದೂ ಮೇನಕೆ ಮೊಲೆ ಅಲ್ಲಾಡಿಸಿ ಕುಣಿದದ್ದು ಬಿ.ಎ., ಎಂ.ಎ.ಗಳಂಥ ಒಂದಕ್ಕಿಂತ ಇನ್ನೊಂದು ಹೆಚ್ಚಿನ ಯೋಗ್ಯತೆ ಪಡೆದ ಪರೀಕ್ಷೆಗಳೆಂದು ಹೇಗೆ ಹೇಳೋಣ.
10. ನನ್ನಂಥವರು ಇನ್ನೊಂದಿಷ್ಟು ಜನ ಇದ್ದರೆ ಈ ಕರ್ನಾಟಕದಲ್ಲಿ ಮರ್ಯಾದಸ್ತರೇ ಉಳಿಯುವುದಿಲ್ಲ.
11. ಕನ್ನಡದ ಸಾಹಿತಿಯಾಗಬೇಕಾದವನು ಮೊದಲು ಬ್ರಾಹ್ಮಣದ್ವೇಷಿಯಾಗಬೇಕಾಗುವುದು ಅನಿವಾರ್ಯ ಹಾಗೂ ಅದು ನ್ಯಾಯ.
12. ಬುದ್ಧಿ ಎಂದರೆ ತಿಳುವಳಿಕೆ ಎಂದರೆ ಇನ್ನೇನು! ಹಳೆಯ ಘಟನೆಗಳ ಹಿನ್ನೆಲೆಯಲ್ಲಿ ವರ್ತಮಾನವನ್ನು ಕುರಿತು ಆಲೋಚಿಸುವುದು ತಾನೆ!
13. ಬದುಕು ಎಂದರೆ ನನಗೆ ಅನಂತವೂ ಬುದ್ಧಿಯುತವೂ ಆದ ತಂತ್ರ, ರಾಜತಂತ್ರ.
14. ಸ್ತಬ್ಧ ಮೌನದಲ್ಲಿ ದೂರದ ಸಾವಿನಲ್ಲಿ ಹೆಜ್ಜೆ ಸಪ್ಪಳ ಕೇಳುತ್ತದೆ - ಯೌವ್ವನ ಅಲೆ ಎದ್ದ ಕೊಳದಂತೆ.
15. ಕೇವಲ ಅಭಿವ್ಯಕ್ತಿ ಮಾಧ್ಯಮದ ದೆಸೆಯಿಂದ ನನ್ನ ಮಹತ್ವದ ಅರ್ಥವೆಲ್ಲಾ ನನ್ನೊಳಗೇ ಉಳಿದುಕೊಂಡಿದೆ ಎಂದು ನನ್ನ ನಂಬಿಕೆ.
16. ಶಿಕಾರಿ ಎಂದರೆ ಉವಿನ ಅಳಿವಿನ ಹೋರಾಟ.
17. ಶಿಕಾರಿ ಒಂದು ಅನಂತವಾದ ಜೂಜು.
18. ಶಿಕಾರಿ ಒಂದು ವ್ಯಸನ. ಅದೊಂದು ಆಲೋಚನೆಗೆ ಹತ್ತುವ ಚಟ. ಆದರೆ ಶಿಕಾರಿಯನ್ನು ಕಂಡರೆ ನನಗೆ ಇಷ್ಟ. ಏಕೆಂದು ನನಗೆ ಸರಿಯಾಗಿ ಗೊತ್ತಿಲ್ಲ. ಮಾಂಸದಾಸೆಗಂತೂ ಅಲ್ಲ.
19. ಅವಿವಾಹಿತರಾಗಿ ಒಟ್ಟಿಗೆ ಮಲಗುವುದು ಅಧಾರ್ಮಿಕ ಎಂದಲ್ಲ. ಎಲ್ಲಿ ಗರ್ಭಿಣಿಯಾಗಿಬಿಡುತ್ತಾಳೋ ಎಂಬ ಭಯದಿಂದ.
20. ಸೃಷ್ಟಿಯ ಬಗ್ಗೆ, ಜೀವನದ ಬಗ್ಗೆ, ಆಲೋಚಿಸಿದಂತೆಲ್ಲಾ ನನ್ನ ಬಗ್ಗೆಯೇ ನನಗೆ ಒಂದು ತಿಳಿವು ಮೂಡತೊಡಗಿತು.
Tuesday, February 02, 2010
‘ಕೇಸರಿ’ಗೇ ಒದ್ದ ‘ನಾಟಿದನ’ದಿಂದ ಮನೆಯ ಹೆಸರೇ ಬದಲಾಯಿತು!
“ಕರು ಹಾಕಿದ ದನಗಳ ಹಾಲು ಹಿಂಡದೇ ಇದ್ದರೆ ಅವು ‘ಗೊಡ್ಡು’ ದನ ಆಗುತ್ತವೆ! ಹಾಗಾಗಿ ದಿನಾ ಬೆಳಗ್ಗೆ ಮತ್ತು ಸಾಯಂಕಾಲ ಅವನ್ನು ಕರೆಯಲೇ ಬೇಕು, ಸಾರ್!” ಎಂದು ದನ ಮೇಯಿಸುವ ಹುಡುಗ ನನಗೆ ತಾಕೀತು ಮಾಡಿದ. ನಾನಾದರೋ ಬಹು ಜಂಬದಿಂದಲೇ “ಬಾಲೂ, ಅದೇನು ದೊಡ್ಡ ವಿಷಯ? ನಾನೇ ಸ್ವತಃ ಬೆಳಗ್ಗೆ ಮತ್ತು ಸಾಯಂಕಾಲ ಸ್ವಲ್ಪ ಹಾಲು ಕರೆದು, ಉಳಿಕೆಯ ಹಾಲನ್ನು ಕರುವಿಗೆ ಉಣ್ಣಲು ಬಿಡುತ್ತೇನೆ” ಎಂದೆ.
ಮರು ದಿನ ಬೆಳಗಾಗುತ್ತಲೇ ಎಳೇ ಕರುವಿನ ದನ ಕೆಂಪಿ ‘ಅಂಬಾ, ಅಂಬಾ!’ ಎಂದು ಅರಚುತ್ತಾ ಇತ್ತು. ನಾನು ನನ್ನ ನಿತ್ಯದ ಯೂನಿಫಾರ್ಮ್ ಆದ ಅರ್ಧ ಪ್ಯಾಂಟ್(ಶಾರ್ಟ್ಸ್), ಟೀ ಶರ್ಟ್, ಮಣಿಗಂಟಿನ ವರೆಗೆ ಕವರ್ ಮಾಡುತ್ತಾ ಇದ್ದ ಬಾಟಾ ಕಂಪನಿಯ ‘ಹಂಟರ್ ಬೂಟ್” ಹಾಗೂ ಬೆಂಗಳೂರಿನಲ್ಲಿ ನಾನು ಕೊಂಡಿದ್ದ ಅಗಲ ಬ್ರಿಮ್ನ ಹ್ಯಾಟು ಧರಿಸಿ ಹಟ್ಟಿಗೆ ಹೋದೆ.
ಹಿಂದಿನ ದಿನ ಸಾಯಂಕಾಲವೇ ಕೆಂಪಿ ದನವನ್ನು ಪ್ರತ್ಯೇಕವಾಗಿ ಕರುಗಳ ಕೋಣೆಯಲ್ಲೇ ಬಾಲು ಕಟ್ಟಿ ಹೋಗಿದ್ದ. ನಾನು ನನ್ನ ಬಿಡಾರದಿಂದ ಹಾಲು ಕರೆಯಲು ಒಂದು ಪಾತ್ರೆ. ಅದರಲ್ಲಿ ಅರ್ಧವಾಸಿ ತಣ್ಣೀರು ತೆಗೆದುಕೊಂಡು ಹಟ್ಟಿಯ ಕಡೆ ಹೊರಟೆ. ನನ್ನ ತಾಯಿಯವರು ದನಗಳನ್ನು ಕರೆಯುವ ಮೊದಲು ಅವಕ್ಕೆ ಆಹಾರ ಕೊಟ್ಟು ಅವುಗಳ ಕೆಚ್ಚಿಲನ್ನು ತೊಳೆದು ಹಾಲು ಹಿಂಡುತ್ತಾ ಇದ್ದುದು ನೆನಪಿನಲ್ಲಿ ಇತ್ತು. ನಾನು ಕೂಡಾ ಹಾಗೆಯೇ ಮಾಡಲು ಹೊರಟಿದ್ದೆ.
ನನಗೆ ಆ ದಿನಗಳಲ್ಲಿ ಹುಲಿಯ ಹಾಲನ್ನು ಕರೆಯುವ ಸ್ಥೈರ್ಯ ಹಾಗೂ ಹುಮ್ಮಸ್ಸು ಇತ್ತು. ’ಯಕಶ್ಚಿತ್ ಒಂದು ನಾಟಿದನದ ಹಾಲು ಕರೆಯುವದೇನು ಮಹಾ!’ ಎಂದು ಕೊಳ್ಳುತ್ತಾ ನಮ್ಮ ಕೆಂಪಿ ದನ ಮತ್ತು ಕರು ಇದ್ದ ಹಟ್ಟಿಯನ್ನು ಪ್ರವೇಶಿಸಿದೆ.
ಧೈರ್ಯವಾಗಿ ‘ಕೆಂಪಿ, ಕೆಂಪಿ!’ ಎನ್ನುತ್ತಾ ಅದರ ಬಳಿ ಹೋದೆ. ಎರಡು ಸಲ ದನದ ಹೆಸರು ಹಿಡಿದು ಕರೆದಾಗಲೇ ‘ಹಾಲುಕರೆಯುವ ಕೆಲಸ ಅರ್ಧ ಮುಗಿಸಿದೆ’ ಎಂಬ ಭಾವನೆ ನನ್ನಲ್ಲಿ ಮೂಡಿತ್ತು.
ಕೆಂಪಿ ದನ ತನ್ನ ಕರುವಿನ ಮೈ ನೆಕ್ಕುತ್ತಾ ನಿಂತಿತ್ತು. ಅದು ನನ್ನ ಕಡೆಗೆ ಗಮನ ಕೊಡಲೇ ಇಲ್ಲ. ಅಟ್ಟದ ಏಣಿ ಹತ್ತಿ ಅದರ ಎದುರಿಗೆ ಒಂದು ಕಟ್ಟು ಒಣ ಹುಲ್ಲು ತಂದು ಹಾಕಿದೆ. ಅದು ಖುಷಿಯಿಂದ ಆ ಹುಲ್ಲನ್ನು ತಿನ್ನ ತೊಡಗಿತು.
ಅದರ ಪುಟ್ಟ ಕರು ಆಗಲೇ ಹೊಟ್ಟೆತುಂಬಾ ಆಗಲೇ ಹಾಲು ಕುಡಿದಿದ್ದರಿಂದ ಸಂತೋಷವಾಗಿ ನನ್ನ ಕಡೆ ಪಿಳಿ ಪಿಳಿ ನೋಡುತ್ತಾ ಇತ್ತು.
ನಾನು ದನದ ಎಡ ಬದಿಯಲ್ಲಿ ಕುಕ್ಕರುಗಾಲಿನಲ್ಲಿ ಕುಳಿತು ತಂಬಿಗೆಯಲ್ಲಿ ಇದ್ದ ತಣೀರನ್ನು ಅದರ ಕೆಚ್ಚಲಿಗೆ ಎರಚಿ ಕೆಚ್ಚಲನ್ನು ತೊಳೆಯಲು ಕೈ ಹಾಕುವ ಮೊದಲೇ ಮಿಂಚಿನ ವೇಗದಲ್ಲಿ ಏನೇನೋ ನಡೆದು ಬಿಟ್ಟಿತು.
ನನ್ನ ಕಣ್ಣಿನ ಇದುರು ಏನೋ ಕಪ್ಪಗಿನ ವಸ್ತು ಸುಳಿದಂತೆ ಆಯಿತು.
ಅದು ನನ್ನ ಮುಖದ ಮೇಲೆಯೇ ಬಂದು ಇಳಿಯಿತು.
ಲಟ್! ಎಂಬ ಶಬ್ದ ಕೂಡಾ ಆಯಿತು.
ನಾನು ಆ ಕ್ಷಣದಲ್ಲೇ ಆಯತಪ್ಪಿ ಹಟ್ಟಿಯ ಶಿಲೆ ಹಾಸಿದ ನೆಲದ ಮೇಲೆ ಬಿದ್ದುಬಿಟ್ಟಿದ್ದೆ.
ನೆಲದಲ್ಲಿ ಬಿದ್ದಿದ್ದ ಸೆಗಣಿ ನನ್ನ ಮೈಗೆ ಮೆತ್ತಿಕೊಳ್ಳುತ್ತಾ ಇತ್ತು.
ನನ್ನ ಕೈಯ್ಯಲ್ಲಿ ಇದ್ದ ಪಾತ್ರೆ ಎಲ್ಲೋ ಹಾರಿ ಹೋಗಿತ್ತು.
ನನ್ನ ತಲೆಯಲ್ಲಿ ಅಗಲ ಬ್ರಿಮ್ ಉಳ್ಳ ಹ್ಯಾಟು ಇದ್ದಿದ್ದರಿಂದ ತಲೆ ನೆಲಕ್ಕೆ ಹೊಡೆದ ವೇಗಕ್ಕೆ ನನ್ನ ತಲೆ ಒಡೆದು ಹೋಗಲಿಲ್ಲ. ಬಿದ್ದ ರಭಸಕ್ಕೆ ನನ್ನ ಹ್ಯಾಟ್ ತಲೆಯಿಂದ ಕಳಚಿ ಸೆಗಣಿಯ ಮೇಲೆ ಅಂಗಾತ ಬಿದ್ದಿತು.
‘ನಾನಗೆ ಏನಾಯಿತು?’ ಎಂದು ಊಹಿಸುವ ಮೊದಲೇ ನನ್ನ ಮುಖದಲ್ಲಿ ಅಸಾಧ್ಯ ನೋವು ಕಾಣಿಸಿಕೊಂಡಿತು. ಹೇಗೋ ಸುಧಾರಿಸಿಕೊಂಡು ಎದ್ದೆ. ನನ್ನ ತಲೆ ‘ಧಿಂ!’ ಎನ್ನುತ್ತಿತ್ತು. ಬಲ ಕಣ್ಣಿನ ಕೆಳಗೆ ಕೆಳದವಡೆಯ ತನಕ ತಡೆಯಲಾರದ ನೋವು ಪಸರಿಸಿತು. ಮುಖ ಮುಟ್ಟಿ ನೋಡಿಕೊಂಡಾಗ ಮುಖದ ಬಲಭಾಗ ಊದಿಕೊಳ್ಳುತ್ತಾಇರುವುದು ಸ್ಪಷ್ಟವಾಯಿತು.
ಮೆಲ್ಲನೆ ಕೆಳಗೆ ಬಿದ್ದಿದ್ದ ಹ್ಯಾಟ್ ಎತ್ತಿಕೊಂಡೆ. ಎಲ್ಲಿಗೋ ಹಾರಿ ಹೋಗಿದ್ದ ಪಾತ್ರೆಯನ್ನು ಹುಡುಕದೇ ‘ಅದು ಹಾಳಾಗಿ ಹೋಗಲಿ!’ ಎಂದು ಶಪಿಸುತ್ತಾ ಮೇಲೆ ಎದ್ದೆ. ಮೈ ಮೇಲೆ ಪಸರಿಸಿದ್ದ ಹಸೀ ಸೆಗಣಿಯ ವಾಸನೆ ತಡೆಯಲು ಅಸಾಧ್ಯ ಎನಿಸಿತು.
ನಾನು ದನದ ಕಡೆ ನೋಡಿದೆ. ಅದು ಏನೂ ನಡೆದಿಲ್ಲವೇನೋ ಎಂಬಂತೆ ತನ್ನ ಕರುವನ್ನು ನೆಕ್ಕುತ್ತಾ ಇತ್ತು. ನನಗೆ ದನದ ಮೇಲೆ ಸಿಟ್ಟು ಉಕ್ಕಿಬಂದಿತ್ತು.
ಪೆಟ್ಟು ತಿಂದ ನೋವಿನಿಂದಾಗಿ ನನ್ನಲ್ಲಿ ನಿಧಾನವಾಗಿ ವಿವೇಕವೂ ಮೂಡಿ ಬರುತ್ತಿತ್ತು. ‘ಆ ಪುಟ್ಟ ಕರುವಿಗೆ ಸೇರಿದ ಹಾಲನ್ನು ಹಿಂಡಿ ತೆಗೆಯುವ ಅಧಿಕಾರ ನಿನಗೆಲ್ಲಿ?’ ಎಂದು ನನ್ನ ಒಳಮನಸ್ಸು ನನ್ನನ್ನು ಕೇಳುತ್ತಾ ಇತ್ತು.
ಮುಖವನ್ನು ಇನ್ನೊಮ್ಮೆ ಸವರಿಕೊಂಡು ನೋಡಿದೆ. ‘ಯಾವ ಹಲ್ಲೂ ಕಿತ್ತು ಹೋಗಿಲ್ಲ. ದವಡೆಯ ಎಲುಬು ಮುರಿದಿಲ್ಲ’ ಎಂದು ಖಾತ್ರಿ ಮಾಡಿಕೊಂಡೆ. ದಪ್ಪವಾಗಿ ಪೊದೆಯಂತೆ ಬೆಳೆದಿದ್ದ ಗಡ್ದದ ಕೂದಲುಗಳು ನನ್ನ ದವಡೆಯ ಎಲುಬು ಮತ್ತು ಹಲ್ಲುಗಳನ್ನು ಕಾಪಾಡಿದ್ದುವು.
‘ಕನ್ನಡಿ ನೋಡಿಕೊಳ್ಳೋಣ!’ ಎಂದರೆ, ಗಡ್ದ ಧಾರಿಯಾದ ನನ್ನ ಮನೆಯಲ್ಲಿ ಕನ್ನಡಿಯೇ ಇರಲಿಲ್ಲ. ಶೇವಿಂಗ್ ಅಗತ್ಯವೇ ಇಲ್ಲದ ಮುಖ! ತಲೆಯಲ್ಲಿ ಬಾಚಣಿಗೆ ಬೇಡದ "ಕ್ರೂ"ಕಟ್! ಗುಡಿಸಲಿಗೆ ಹೋಗಿ ಸ್ಟೈನ್ಲೆಸ್ ಸ್ಟೀಲಿನ ಊಟದ ತಟ್ಟೆಯಲ್ಲಿ ಮುಖ ನೋಡಿಕೊಂಡೆ. ಯಾರದೋ ಮುಖ ಬಲ ಬದಿ ಊದಿಕೊಂಡಂತೆ ಕಂಡಿತು. ಬಲಕಣ್ಣು ಊದಿಕೊಂಡು ಅರ್ಧ ಮುಚ್ಚಿತ್ತು.
ನಾನು ಮಾಮೂಲಿಯಾಗಿ ಸ್ನಾನಕ್ಕೆ ಉಪಯೋಗಿಸುತ್ತಾ ಇದ್ದ ಮಾರ್ಗೋ ಸೋಪ್ ಹಿಡಿದು ನೇರವಾಗಿ ನದಿಯ ಬದಿಗೆ ನಡೆದೆ, ಶೂ ಮತ್ತು ಹ್ಯಾಟ್ ಸಮೇತ ನೀರಿಗಿಳಿದು ಮೈಗೆ ಮೆತ್ತಿದ ಸೆಗಣಿ ತೊಳೆದುಕೊಂಡೆ. ಹರಿಯುವ ನೀರಿನಲ್ಲಿ ಹ್ಯಾಟ್ ಮತ್ತು ಬೂಟ್ ತೊಳೆದು ಬದಿಗೆ ಇರಿಸಿದೆ. ಒದ್ದೆ ಬಟ್ಟೆಯಲ್ಲೇ ಮನೆಗೆ ಬಂದು ಬಟ್ಟೆ ಬದಲಾಯಿಸಿದೆ.
ಬೆಳಗ್ಗಿಗೆ ಇಟ್ಟುಕೊಂಡ ಹಿಂದಿನ ದಿನದ ಹಾಲು ಆಗಲೇ ಮುಂಜಾನೆಯ ಟೀ ಮಾಡಿದಾಗ ಖರ್ಚಾಗಿತ್ತು. ಬಿಸಿ ಬಿಸಿಯಾಗಿ ಒಂದು ಮಗ್ ಕಪ್ಪು ಚಹಾ ಮಾಡಿ ಕುಡಿದೆ.
ಹೊಳೆಯ ನೀರಿನ ಅಭಿಷೇಕದಿಂದ ಮುಖದ ಊತ ಕಡಿಮೆ ಆಗುತ್ತಾ ಇತ್ತು.
ಕೆಲಸದ ಆಳುಗಳು ಇನ್ನೂ ಬಂದಿರಲಿಲ್ಲ. ಗಂಟೆ ನೋಡಿದರೆ ಏಳೂವರೆ! ಅರೆ! ನನ್ನ ಕೈಯ್ಯಲ್ಲಿ ಇದ್ದ ಸ್ವಿಸ್ “ಎನಿಕಾರ್” ವಾಚ್ ಇನ್ನೂ ನಡೆಯುತ್ತಾ ಇತ್ತು! ಅದು ನೀರು ಕುಡಿದಿರಲೂ ಇಲ್ಲ!
ಪೆಟ್ಟು ತಿಂದ (ಒದೆಸಿಕೊಂಡ) ಮುನಿಸು ಇನ್ನೂ ಕಡಿಮೆ ಆಗಿರಲಿಲ್ಲ. ಆ ಕೆಂಪಿ ಎಂಬ ದನಕ್ಕೆ ಚೆನ್ನಾಗಿ ಹೊಡೆದು ಬಿಡೋಣಾಂತ ಒಮ್ಮೆ ಅನ್ನಿಸಿತು. ‘ಎಲೋ ಬುದ್ಧಿಯುಳ್ಳ ಮನುಷ್ಯ ಪ್ರಾಣಿಯೇ! ದನದ ಮೇಲೆ ಯಾಕೆ ಸಿಟ್ಟು ಮಾಡುತ್ತೀಯಾ? ತಪ್ಪು ನಿನ್ನದೇ ಅಲ್ಲವೇ? ನಿನಗೂ ಅದು ಹಾಲು ಹಿಂಡಲು ಬಿಡುತ್ತಿತ್ತೋ ಏನೋ? ನಿನ್ನ ವಿಚಿತ್ರ ವೇಷ! ಮುಖ ತುಂಬ ಗಡ್ಡ! ತಲೆಯ ಮೇಲೆ ಒಂದು ಅಗಲ ಹ್ಯಾಟು! ಅದರ ಮೇಲೆ, ಚಳಿಗಾಲದ ಈ ಹವಾಮಾನದಲ್ಲಿ ಅದರ ಕೆಚ್ಚಲಿಗೆ ಮಹಾ ಬುದ್ಧಿವಂತನಂತೆ ತಣ್ಣೀರು ಎರೆಚಿದೆ! ನೀನು ಮಾಡಿದ್ದು ತಪ್ಪಲ್ಲವೇ?’ ಎಂದಿತು ಸುಪ್ತ ಮನಸ್ಸು.
‘ಹೌದು! ನಾನು ಉಗುರು ಬೆಚ್ಚನೆಯ ನೀರು ಕೊಂಡೊಯ್ಯ ಬೇಕಿತ್ತು! ಹೊಳೆಯಲ್ಲೇ ದಿನಾ ತಣ್ಣೀರಲ್ಲಿ ಮುಳುಗಿ ಸ್ನಾನ ಮಾಡುವ ಈ ನರ ಪ್ರಾಣಿಗೆ, ಒಂದೆರಡು ದಿನಗಳ ಹಿಂದಷ್ಟೇ ಕರು ಹಾಕಿದ ಆ ದನಕ್ಕೆ ಚಳಿ ಆಗಬಹುದೆಂಬ ಪರಿಜ್ಞಾನವೇ ಇರಲಿಲ್ಲ! ಸರಿ! ನಾನು ತಪ್ಪೇ ಮಾಡಿರಬಹುದು. ಆದರೆ, ಆ ದನ ನನಗೆ ಅಷ್ಟು ಜೋರಾಗಿ ಒದೆಯಬೇಕಿರಲಿಲ್ಲ! ನಿಧಾನವಾಗಿ ಕಾಲು ಝಾಡಿಸಿ ಅದು ಹೆದರಿಸಿದ್ದರೆ ಸಾಕಿತ್ತು!’ ಅಂತ ನನ್ನೊಳಗೇ ಸ್ವಲ್ಪ ಸಮಾಧಾನ ಮಾಡಿಕೊಂಡೆ.
ನನ್ನ ಮನೆಯೊಳಗೆ ಒಂದು ಚಿಕ್ಕ ನೀಲಿ ಪೈಂಟ್ನ ಡಬ್ಬಿ ಮತ್ತು ಬ್ರಶ್ ಇತ್ತು. ಅದನ್ನು ಒಪಯೋಗಿಸಿ ನನ್ನ ಮನೆಗೆ K ಸ रि ಎಂಬ ಹೆಸರನ್ನು ಬರೆದಿದ್ದೆ. ಕೂಡಲೇ ಆ ಡಬ್ಬವನ್ನು ಹುಡುಕಿ ನಮ್ಮ ಹಟ್ಟಿಗೆ zoo ಎಂಬ ಹೆಸರನ್ನು ಬರೆದು ಅಂದು ತಿಂದ ಒದೆಗೆ ಸೇಡು ತೀರಿಸಿಕೊಂಡೆ.
ಆನಂತರ ನಾನು ಅಂದಿನ ಒದೆ ತಿಂದ ಪ್ರಸಂಗವನ್ನು ಬಲವಂತವಾಗಿ ಮರೆತೇ ಬಿಟ್ಟೆ!
{ಶ್ರೀ ಮಧುಸೂದನ ಪೆಜತ್ತಾಯ ಅವರು ಹಿರಿಯ ಕಾಫಿ ಬೆಳೆಗಾರರು. ಭದ್ರಾ ನದಿಯ ಆದಿಭಾಗದಲ್ಲಿ ಇವರ ವಿಶಾಲವಾದ ತೋಟವಿದೆ. ಹೊಳೆಯ ಈ ಕಡೆ ಬಾಳೆಹೊಳೆ ಎಂಬ ಊರಿದ್ದರೆ ಆ ಕಡೆ ಇವರ ಸುಳಿಮನೆ ತೋಟವಿದೆ. ಪ್ರಗತಿಪರ ರೈತರಾಗಿರುವ ಇವರ ಜೀವನಾನುಭವ ದೊಡ್ಡದು. ಎದುರಿಗೆ ಕುಳಿತಿರುವವರಿಗೆ ಒಂದರೆಕ್ಷಣವೂ ಬೋರು ಹೊಡೆಸದಂತೆ, ವಾತಾವರಣದಲ್ಲಿ ನಗುವಿನ ಸದ್ದು ಸೃಷ್ಟಿಸಬಲ್ಲ ವಾಕ್ಚಾತುರ್ಯ ಇವರಿಗಿದೆ. ತಮ್ಮ ಬಲ್ಲವರಿಂದ ‘ಕೇಸರಿ’ ಎಂದೇ ಕರೆಸಿಕೊಳ್ಳುತ್ತಿರುವ ಶ್ರೀಯುತರು ಈಗ ರೈತಬದುಕಿನಿಂದ ಆಂಶಿಕ ನಿವೃತ್ತರಾಗಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಮಕ್ಕಳು ತೋಟದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ವೃತ್ತಿಯಿಂದ ರೈತರಾದರೂ, ಪ್ರವೃತ್ತಿಯಿಂದ ಒಬ್ಬ ಒಳ್ಳೆಯ ವಾಗ್ಮಿ, ಫೋಟೋಗ್ರಾಫರ್, ಕೃಷಿಸಂಶೋಧಕ ಹಾಗೂ ಬರಹಗಾರರು ಕೂಡಾ. ಶ್ರೀಯುತರು ‘ಕಾಗದದ ದೋಣಿ’ ಎಂಬ ಆತ್ಮವೃತ್ತಾಂತವೆನಿಸಬಹುದಾದ ಲೇಖನಸಂಕಲನವನ್ನು ಬರೆದಿದ್ದಾರೆ. ಆ ಲೇಖನಗಳನ್ನು ಓದುವುದೆಂದರೆ ಭೂತಕಾಲದೊಂದಿಗಿನ ಪಿಸುಮಾತು ಕೇಳಿಸಿಕೊಂಡಂತೆ! ಈ ಪುಸ್ತಕದ ಲೇಖನಗಳು ಕೆಂಡಸಂಪಿಗೆಯಲ್ಲಿ ಧಾರಾವಾಹಿಯಾಗಿ ಪ್ರಕಟವಾಗುತ್ತಿವೆ. ಇದಲ್ಲದೆ ಅವರು ಸಾಕಿದ್ದ ರಕ್ಷಾ ಎಂಬ ನಾಯಿಯನ್ನು ಕುರಿತು ‘ನಮ್ಮ ರಕ್ಷಕ ರಕ್ಷಾ’ ಎಂದು ರಕ್ಷಾನ ಜೀವನಚರಿತ್ರೆಯನ್ನೂ ಬರೆದಿದ್ದಾರೆ. ಶ್ರೀಯುತರ ಇಂಗ್ಲಿಷ್ ಪ್ರೌಢಿಮೆ ಉನ್ನತಸ್ತರದ್ದಾಗಿದ್ದು ಸದ್ಯದಲ್ಲೇ ಅವರ ಒಂದು ಇಂಗ್ಲಿಷ್ ಕೃತಿಯೂ ಪ್ರಕಟವಾಗಲಿದೆ. ಅವರ ಅನುಮತಿಯ ಮೇರೆಗೆ ಅವರು ನನಗೆ ಕಳುಹಿಸಿದ್ದ ಹಲವಾರು ಬರಹಗಳನ್ನು ಲೇಖನಗಳಾಗಿ ನನ್ನ ಬ್ಲಾಗಿನಲ್ಲಿ ಪ್ರಕಟಿಸುತ್ತಿದ್ದೇನೆ.} - ಸತ್ಯನಾರಾಯಣ
(ಚಿತ್ರಗಳು: ಲೇಖಕರವು)
ಮರು ದಿನ ಬೆಳಗಾಗುತ್ತಲೇ ಎಳೇ ಕರುವಿನ ದನ ಕೆಂಪಿ ‘ಅಂಬಾ, ಅಂಬಾ!’ ಎಂದು ಅರಚುತ್ತಾ ಇತ್ತು. ನಾನು ನನ್ನ ನಿತ್ಯದ ಯೂನಿಫಾರ್ಮ್ ಆದ ಅರ್ಧ ಪ್ಯಾಂಟ್(ಶಾರ್ಟ್ಸ್), ಟೀ ಶರ್ಟ್, ಮಣಿಗಂಟಿನ ವರೆಗೆ ಕವರ್ ಮಾಡುತ್ತಾ ಇದ್ದ ಬಾಟಾ ಕಂಪನಿಯ ‘ಹಂಟರ್ ಬೂಟ್” ಹಾಗೂ ಬೆಂಗಳೂರಿನಲ್ಲಿ ನಾನು ಕೊಂಡಿದ್ದ ಅಗಲ ಬ್ರಿಮ್ನ ಹ್ಯಾಟು ಧರಿಸಿ ಹಟ್ಟಿಗೆ ಹೋದೆ.
ಹಿಂದಿನ ದಿನ ಸಾಯಂಕಾಲವೇ ಕೆಂಪಿ ದನವನ್ನು ಪ್ರತ್ಯೇಕವಾಗಿ ಕರುಗಳ ಕೋಣೆಯಲ್ಲೇ ಬಾಲು ಕಟ್ಟಿ ಹೋಗಿದ್ದ. ನಾನು ನನ್ನ ಬಿಡಾರದಿಂದ ಹಾಲು ಕರೆಯಲು ಒಂದು ಪಾತ್ರೆ. ಅದರಲ್ಲಿ ಅರ್ಧವಾಸಿ ತಣ್ಣೀರು ತೆಗೆದುಕೊಂಡು ಹಟ್ಟಿಯ ಕಡೆ ಹೊರಟೆ. ನನ್ನ ತಾಯಿಯವರು ದನಗಳನ್ನು ಕರೆಯುವ ಮೊದಲು ಅವಕ್ಕೆ ಆಹಾರ ಕೊಟ್ಟು ಅವುಗಳ ಕೆಚ್ಚಿಲನ್ನು ತೊಳೆದು ಹಾಲು ಹಿಂಡುತ್ತಾ ಇದ್ದುದು ನೆನಪಿನಲ್ಲಿ ಇತ್ತು. ನಾನು ಕೂಡಾ ಹಾಗೆಯೇ ಮಾಡಲು ಹೊರಟಿದ್ದೆ.
ನನಗೆ ಆ ದಿನಗಳಲ್ಲಿ ಹುಲಿಯ ಹಾಲನ್ನು ಕರೆಯುವ ಸ್ಥೈರ್ಯ ಹಾಗೂ ಹುಮ್ಮಸ್ಸು ಇತ್ತು. ’ಯಕಶ್ಚಿತ್ ಒಂದು ನಾಟಿದನದ ಹಾಲು ಕರೆಯುವದೇನು ಮಹಾ!’ ಎಂದು ಕೊಳ್ಳುತ್ತಾ ನಮ್ಮ ಕೆಂಪಿ ದನ ಮತ್ತು ಕರು ಇದ್ದ ಹಟ್ಟಿಯನ್ನು ಪ್ರವೇಶಿಸಿದೆ.
ಧೈರ್ಯವಾಗಿ ‘ಕೆಂಪಿ, ಕೆಂಪಿ!’ ಎನ್ನುತ್ತಾ ಅದರ ಬಳಿ ಹೋದೆ. ಎರಡು ಸಲ ದನದ ಹೆಸರು ಹಿಡಿದು ಕರೆದಾಗಲೇ ‘ಹಾಲುಕರೆಯುವ ಕೆಲಸ ಅರ್ಧ ಮುಗಿಸಿದೆ’ ಎಂಬ ಭಾವನೆ ನನ್ನಲ್ಲಿ ಮೂಡಿತ್ತು.
ಕೆಂಪಿ ದನ ತನ್ನ ಕರುವಿನ ಮೈ ನೆಕ್ಕುತ್ತಾ ನಿಂತಿತ್ತು. ಅದು ನನ್ನ ಕಡೆಗೆ ಗಮನ ಕೊಡಲೇ ಇಲ್ಲ. ಅಟ್ಟದ ಏಣಿ ಹತ್ತಿ ಅದರ ಎದುರಿಗೆ ಒಂದು ಕಟ್ಟು ಒಣ ಹುಲ್ಲು ತಂದು ಹಾಕಿದೆ. ಅದು ಖುಷಿಯಿಂದ ಆ ಹುಲ್ಲನ್ನು ತಿನ್ನ ತೊಡಗಿತು.
ಅದರ ಪುಟ್ಟ ಕರು ಆಗಲೇ ಹೊಟ್ಟೆತುಂಬಾ ಆಗಲೇ ಹಾಲು ಕುಡಿದಿದ್ದರಿಂದ ಸಂತೋಷವಾಗಿ ನನ್ನ ಕಡೆ ಪಿಳಿ ಪಿಳಿ ನೋಡುತ್ತಾ ಇತ್ತು.
ನಾನು ದನದ ಎಡ ಬದಿಯಲ್ಲಿ ಕುಕ್ಕರುಗಾಲಿನಲ್ಲಿ ಕುಳಿತು ತಂಬಿಗೆಯಲ್ಲಿ ಇದ್ದ ತಣೀರನ್ನು ಅದರ ಕೆಚ್ಚಲಿಗೆ ಎರಚಿ ಕೆಚ್ಚಲನ್ನು ತೊಳೆಯಲು ಕೈ ಹಾಕುವ ಮೊದಲೇ ಮಿಂಚಿನ ವೇಗದಲ್ಲಿ ಏನೇನೋ ನಡೆದು ಬಿಟ್ಟಿತು.
ನನ್ನ ಕಣ್ಣಿನ ಇದುರು ಏನೋ ಕಪ್ಪಗಿನ ವಸ್ತು ಸುಳಿದಂತೆ ಆಯಿತು.
ಅದು ನನ್ನ ಮುಖದ ಮೇಲೆಯೇ ಬಂದು ಇಳಿಯಿತು.
ಲಟ್! ಎಂಬ ಶಬ್ದ ಕೂಡಾ ಆಯಿತು.
ನಾನು ಆ ಕ್ಷಣದಲ್ಲೇ ಆಯತಪ್ಪಿ ಹಟ್ಟಿಯ ಶಿಲೆ ಹಾಸಿದ ನೆಲದ ಮೇಲೆ ಬಿದ್ದುಬಿಟ್ಟಿದ್ದೆ.
ನೆಲದಲ್ಲಿ ಬಿದ್ದಿದ್ದ ಸೆಗಣಿ ನನ್ನ ಮೈಗೆ ಮೆತ್ತಿಕೊಳ್ಳುತ್ತಾ ಇತ್ತು.
ನನ್ನ ಕೈಯ್ಯಲ್ಲಿ ಇದ್ದ ಪಾತ್ರೆ ಎಲ್ಲೋ ಹಾರಿ ಹೋಗಿತ್ತು.
ನನ್ನ ತಲೆಯಲ್ಲಿ ಅಗಲ ಬ್ರಿಮ್ ಉಳ್ಳ ಹ್ಯಾಟು ಇದ್ದಿದ್ದರಿಂದ ತಲೆ ನೆಲಕ್ಕೆ ಹೊಡೆದ ವೇಗಕ್ಕೆ ನನ್ನ ತಲೆ ಒಡೆದು ಹೋಗಲಿಲ್ಲ. ಬಿದ್ದ ರಭಸಕ್ಕೆ ನನ್ನ ಹ್ಯಾಟ್ ತಲೆಯಿಂದ ಕಳಚಿ ಸೆಗಣಿಯ ಮೇಲೆ ಅಂಗಾತ ಬಿದ್ದಿತು.
‘ನಾನಗೆ ಏನಾಯಿತು?’ ಎಂದು ಊಹಿಸುವ ಮೊದಲೇ ನನ್ನ ಮುಖದಲ್ಲಿ ಅಸಾಧ್ಯ ನೋವು ಕಾಣಿಸಿಕೊಂಡಿತು. ಹೇಗೋ ಸುಧಾರಿಸಿಕೊಂಡು ಎದ್ದೆ. ನನ್ನ ತಲೆ ‘ಧಿಂ!’ ಎನ್ನುತ್ತಿತ್ತು. ಬಲ ಕಣ್ಣಿನ ಕೆಳಗೆ ಕೆಳದವಡೆಯ ತನಕ ತಡೆಯಲಾರದ ನೋವು ಪಸರಿಸಿತು. ಮುಖ ಮುಟ್ಟಿ ನೋಡಿಕೊಂಡಾಗ ಮುಖದ ಬಲಭಾಗ ಊದಿಕೊಳ್ಳುತ್ತಾಇರುವುದು ಸ್ಪಷ್ಟವಾಯಿತು.
ಮೆಲ್ಲನೆ ಕೆಳಗೆ ಬಿದ್ದಿದ್ದ ಹ್ಯಾಟ್ ಎತ್ತಿಕೊಂಡೆ. ಎಲ್ಲಿಗೋ ಹಾರಿ ಹೋಗಿದ್ದ ಪಾತ್ರೆಯನ್ನು ಹುಡುಕದೇ ‘ಅದು ಹಾಳಾಗಿ ಹೋಗಲಿ!’ ಎಂದು ಶಪಿಸುತ್ತಾ ಮೇಲೆ ಎದ್ದೆ. ಮೈ ಮೇಲೆ ಪಸರಿಸಿದ್ದ ಹಸೀ ಸೆಗಣಿಯ ವಾಸನೆ ತಡೆಯಲು ಅಸಾಧ್ಯ ಎನಿಸಿತು.
ನಾನು ದನದ ಕಡೆ ನೋಡಿದೆ. ಅದು ಏನೂ ನಡೆದಿಲ್ಲವೇನೋ ಎಂಬಂತೆ ತನ್ನ ಕರುವನ್ನು ನೆಕ್ಕುತ್ತಾ ಇತ್ತು. ನನಗೆ ದನದ ಮೇಲೆ ಸಿಟ್ಟು ಉಕ್ಕಿಬಂದಿತ್ತು.
ಪೆಟ್ಟು ತಿಂದ ನೋವಿನಿಂದಾಗಿ ನನ್ನಲ್ಲಿ ನಿಧಾನವಾಗಿ ವಿವೇಕವೂ ಮೂಡಿ ಬರುತ್ತಿತ್ತು. ‘ಆ ಪುಟ್ಟ ಕರುವಿಗೆ ಸೇರಿದ ಹಾಲನ್ನು ಹಿಂಡಿ ತೆಗೆಯುವ ಅಧಿಕಾರ ನಿನಗೆಲ್ಲಿ?’ ಎಂದು ನನ್ನ ಒಳಮನಸ್ಸು ನನ್ನನ್ನು ಕೇಳುತ್ತಾ ಇತ್ತು.
ಮುಖವನ್ನು ಇನ್ನೊಮ್ಮೆ ಸವರಿಕೊಂಡು ನೋಡಿದೆ. ‘ಯಾವ ಹಲ್ಲೂ ಕಿತ್ತು ಹೋಗಿಲ್ಲ. ದವಡೆಯ ಎಲುಬು ಮುರಿದಿಲ್ಲ’ ಎಂದು ಖಾತ್ರಿ ಮಾಡಿಕೊಂಡೆ. ದಪ್ಪವಾಗಿ ಪೊದೆಯಂತೆ ಬೆಳೆದಿದ್ದ ಗಡ್ದದ ಕೂದಲುಗಳು ನನ್ನ ದವಡೆಯ ಎಲುಬು ಮತ್ತು ಹಲ್ಲುಗಳನ್ನು ಕಾಪಾಡಿದ್ದುವು.
‘ಕನ್ನಡಿ ನೋಡಿಕೊಳ್ಳೋಣ!’ ಎಂದರೆ, ಗಡ್ದ ಧಾರಿಯಾದ ನನ್ನ ಮನೆಯಲ್ಲಿ ಕನ್ನಡಿಯೇ ಇರಲಿಲ್ಲ. ಶೇವಿಂಗ್ ಅಗತ್ಯವೇ ಇಲ್ಲದ ಮುಖ! ತಲೆಯಲ್ಲಿ ಬಾಚಣಿಗೆ ಬೇಡದ "ಕ್ರೂ"ಕಟ್! ಗುಡಿಸಲಿಗೆ ಹೋಗಿ ಸ್ಟೈನ್ಲೆಸ್ ಸ್ಟೀಲಿನ ಊಟದ ತಟ್ಟೆಯಲ್ಲಿ ಮುಖ ನೋಡಿಕೊಂಡೆ. ಯಾರದೋ ಮುಖ ಬಲ ಬದಿ ಊದಿಕೊಂಡಂತೆ ಕಂಡಿತು. ಬಲಕಣ್ಣು ಊದಿಕೊಂಡು ಅರ್ಧ ಮುಚ್ಚಿತ್ತು.
ನಾನು ಮಾಮೂಲಿಯಾಗಿ ಸ್ನಾನಕ್ಕೆ ಉಪಯೋಗಿಸುತ್ತಾ ಇದ್ದ ಮಾರ್ಗೋ ಸೋಪ್ ಹಿಡಿದು ನೇರವಾಗಿ ನದಿಯ ಬದಿಗೆ ನಡೆದೆ, ಶೂ ಮತ್ತು ಹ್ಯಾಟ್ ಸಮೇತ ನೀರಿಗಿಳಿದು ಮೈಗೆ ಮೆತ್ತಿದ ಸೆಗಣಿ ತೊಳೆದುಕೊಂಡೆ. ಹರಿಯುವ ನೀರಿನಲ್ಲಿ ಹ್ಯಾಟ್ ಮತ್ತು ಬೂಟ್ ತೊಳೆದು ಬದಿಗೆ ಇರಿಸಿದೆ. ಒದ್ದೆ ಬಟ್ಟೆಯಲ್ಲೇ ಮನೆಗೆ ಬಂದು ಬಟ್ಟೆ ಬದಲಾಯಿಸಿದೆ.
ಬೆಳಗ್ಗಿಗೆ ಇಟ್ಟುಕೊಂಡ ಹಿಂದಿನ ದಿನದ ಹಾಲು ಆಗಲೇ ಮುಂಜಾನೆಯ ಟೀ ಮಾಡಿದಾಗ ಖರ್ಚಾಗಿತ್ತು. ಬಿಸಿ ಬಿಸಿಯಾಗಿ ಒಂದು ಮಗ್ ಕಪ್ಪು ಚಹಾ ಮಾಡಿ ಕುಡಿದೆ.
ಹೊಳೆಯ ನೀರಿನ ಅಭಿಷೇಕದಿಂದ ಮುಖದ ಊತ ಕಡಿಮೆ ಆಗುತ್ತಾ ಇತ್ತು.
ಕೆಲಸದ ಆಳುಗಳು ಇನ್ನೂ ಬಂದಿರಲಿಲ್ಲ. ಗಂಟೆ ನೋಡಿದರೆ ಏಳೂವರೆ! ಅರೆ! ನನ್ನ ಕೈಯ್ಯಲ್ಲಿ ಇದ್ದ ಸ್ವಿಸ್ “ಎನಿಕಾರ್” ವಾಚ್ ಇನ್ನೂ ನಡೆಯುತ್ತಾ ಇತ್ತು! ಅದು ನೀರು ಕುಡಿದಿರಲೂ ಇಲ್ಲ!
ಪೆಟ್ಟು ತಿಂದ (ಒದೆಸಿಕೊಂಡ) ಮುನಿಸು ಇನ್ನೂ ಕಡಿಮೆ ಆಗಿರಲಿಲ್ಲ. ಆ ಕೆಂಪಿ ಎಂಬ ದನಕ್ಕೆ ಚೆನ್ನಾಗಿ ಹೊಡೆದು ಬಿಡೋಣಾಂತ ಒಮ್ಮೆ ಅನ್ನಿಸಿತು. ‘ಎಲೋ ಬುದ್ಧಿಯುಳ್ಳ ಮನುಷ್ಯ ಪ್ರಾಣಿಯೇ! ದನದ ಮೇಲೆ ಯಾಕೆ ಸಿಟ್ಟು ಮಾಡುತ್ತೀಯಾ? ತಪ್ಪು ನಿನ್ನದೇ ಅಲ್ಲವೇ? ನಿನಗೂ ಅದು ಹಾಲು ಹಿಂಡಲು ಬಿಡುತ್ತಿತ್ತೋ ಏನೋ? ನಿನ್ನ ವಿಚಿತ್ರ ವೇಷ! ಮುಖ ತುಂಬ ಗಡ್ಡ! ತಲೆಯ ಮೇಲೆ ಒಂದು ಅಗಲ ಹ್ಯಾಟು! ಅದರ ಮೇಲೆ, ಚಳಿಗಾಲದ ಈ ಹವಾಮಾನದಲ್ಲಿ ಅದರ ಕೆಚ್ಚಲಿಗೆ ಮಹಾ ಬುದ್ಧಿವಂತನಂತೆ ತಣ್ಣೀರು ಎರೆಚಿದೆ! ನೀನು ಮಾಡಿದ್ದು ತಪ್ಪಲ್ಲವೇ?’ ಎಂದಿತು ಸುಪ್ತ ಮನಸ್ಸು.
‘ಹೌದು! ನಾನು ಉಗುರು ಬೆಚ್ಚನೆಯ ನೀರು ಕೊಂಡೊಯ್ಯ ಬೇಕಿತ್ತು! ಹೊಳೆಯಲ್ಲೇ ದಿನಾ ತಣ್ಣೀರಲ್ಲಿ ಮುಳುಗಿ ಸ್ನಾನ ಮಾಡುವ ಈ ನರ ಪ್ರಾಣಿಗೆ, ಒಂದೆರಡು ದಿನಗಳ ಹಿಂದಷ್ಟೇ ಕರು ಹಾಕಿದ ಆ ದನಕ್ಕೆ ಚಳಿ ಆಗಬಹುದೆಂಬ ಪರಿಜ್ಞಾನವೇ ಇರಲಿಲ್ಲ! ಸರಿ! ನಾನು ತಪ್ಪೇ ಮಾಡಿರಬಹುದು. ಆದರೆ, ಆ ದನ ನನಗೆ ಅಷ್ಟು ಜೋರಾಗಿ ಒದೆಯಬೇಕಿರಲಿಲ್ಲ! ನಿಧಾನವಾಗಿ ಕಾಲು ಝಾಡಿಸಿ ಅದು ಹೆದರಿಸಿದ್ದರೆ ಸಾಕಿತ್ತು!’ ಅಂತ ನನ್ನೊಳಗೇ ಸ್ವಲ್ಪ ಸಮಾಧಾನ ಮಾಡಿಕೊಂಡೆ.
ನನ್ನ ಮನೆಯೊಳಗೆ ಒಂದು ಚಿಕ್ಕ ನೀಲಿ ಪೈಂಟ್ನ ಡಬ್ಬಿ ಮತ್ತು ಬ್ರಶ್ ಇತ್ತು. ಅದನ್ನು ಒಪಯೋಗಿಸಿ ನನ್ನ ಮನೆಗೆ K ಸ रि ಎಂಬ ಹೆಸರನ್ನು ಬರೆದಿದ್ದೆ. ಕೂಡಲೇ ಆ ಡಬ್ಬವನ್ನು ಹುಡುಕಿ ನಮ್ಮ ಹಟ್ಟಿಗೆ zoo ಎಂಬ ಹೆಸರನ್ನು ಬರೆದು ಅಂದು ತಿಂದ ಒದೆಗೆ ಸೇಡು ತೀರಿಸಿಕೊಂಡೆ.
ಆನಂತರ ನಾನು ಅಂದಿನ ಒದೆ ತಿಂದ ಪ್ರಸಂಗವನ್ನು ಬಲವಂತವಾಗಿ ಮರೆತೇ ಬಿಟ್ಟೆ!
{ಶ್ರೀ ಮಧುಸೂದನ ಪೆಜತ್ತಾಯ ಅವರು ಹಿರಿಯ ಕಾಫಿ ಬೆಳೆಗಾರರು. ಭದ್ರಾ ನದಿಯ ಆದಿಭಾಗದಲ್ಲಿ ಇವರ ವಿಶಾಲವಾದ ತೋಟವಿದೆ. ಹೊಳೆಯ ಈ ಕಡೆ ಬಾಳೆಹೊಳೆ ಎಂಬ ಊರಿದ್ದರೆ ಆ ಕಡೆ ಇವರ ಸುಳಿಮನೆ ತೋಟವಿದೆ. ಪ್ರಗತಿಪರ ರೈತರಾಗಿರುವ ಇವರ ಜೀವನಾನುಭವ ದೊಡ್ಡದು. ಎದುರಿಗೆ ಕುಳಿತಿರುವವರಿಗೆ ಒಂದರೆಕ್ಷಣವೂ ಬೋರು ಹೊಡೆಸದಂತೆ, ವಾತಾವರಣದಲ್ಲಿ ನಗುವಿನ ಸದ್ದು ಸೃಷ್ಟಿಸಬಲ್ಲ ವಾಕ್ಚಾತುರ್ಯ ಇವರಿಗಿದೆ. ತಮ್ಮ ಬಲ್ಲವರಿಂದ ‘ಕೇಸರಿ’ ಎಂದೇ ಕರೆಸಿಕೊಳ್ಳುತ್ತಿರುವ ಶ್ರೀಯುತರು ಈಗ ರೈತಬದುಕಿನಿಂದ ಆಂಶಿಕ ನಿವೃತ್ತರಾಗಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಮಕ್ಕಳು ತೋಟದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ವೃತ್ತಿಯಿಂದ ರೈತರಾದರೂ, ಪ್ರವೃತ್ತಿಯಿಂದ ಒಬ್ಬ ಒಳ್ಳೆಯ ವಾಗ್ಮಿ, ಫೋಟೋಗ್ರಾಫರ್, ಕೃಷಿಸಂಶೋಧಕ ಹಾಗೂ ಬರಹಗಾರರು ಕೂಡಾ. ಶ್ರೀಯುತರು ‘ಕಾಗದದ ದೋಣಿ’ ಎಂಬ ಆತ್ಮವೃತ್ತಾಂತವೆನಿಸಬಹುದಾದ ಲೇಖನಸಂಕಲನವನ್ನು ಬರೆದಿದ್ದಾರೆ. ಆ ಲೇಖನಗಳನ್ನು ಓದುವುದೆಂದರೆ ಭೂತಕಾಲದೊಂದಿಗಿನ ಪಿಸುಮಾತು ಕೇಳಿಸಿಕೊಂಡಂತೆ! ಈ ಪುಸ್ತಕದ ಲೇಖನಗಳು ಕೆಂಡಸಂಪಿಗೆಯಲ್ಲಿ ಧಾರಾವಾಹಿಯಾಗಿ ಪ್ರಕಟವಾಗುತ್ತಿವೆ. ಇದಲ್ಲದೆ ಅವರು ಸಾಕಿದ್ದ ರಕ್ಷಾ ಎಂಬ ನಾಯಿಯನ್ನು ಕುರಿತು ‘ನಮ್ಮ ರಕ್ಷಕ ರಕ್ಷಾ’ ಎಂದು ರಕ್ಷಾನ ಜೀವನಚರಿತ್ರೆಯನ್ನೂ ಬರೆದಿದ್ದಾರೆ. ಶ್ರೀಯುತರ ಇಂಗ್ಲಿಷ್ ಪ್ರೌಢಿಮೆ ಉನ್ನತಸ್ತರದ್ದಾಗಿದ್ದು ಸದ್ಯದಲ್ಲೇ ಅವರ ಒಂದು ಇಂಗ್ಲಿಷ್ ಕೃತಿಯೂ ಪ್ರಕಟವಾಗಲಿದೆ. ಅವರ ಅನುಮತಿಯ ಮೇರೆಗೆ ಅವರು ನನಗೆ ಕಳುಹಿಸಿದ್ದ ಹಲವಾರು ಬರಹಗಳನ್ನು ಲೇಖನಗಳಾಗಿ ನನ್ನ ಬ್ಲಾಗಿನಲ್ಲಿ ಪ್ರಕಟಿಸುತ್ತಿದ್ದೇನೆ.} - ಸತ್ಯನಾರಾಯಣ
(ಚಿತ್ರಗಳು: ಲೇಖಕರವು)
Subscribe to:
Posts (Atom)